ಸುದ್ದಿ ಕಣಜ.ಕಾಂ
ಶಿಕಾರಿಪುರ: ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎಲ್ಲವೂ ಸರಾಗಿವಾಗಿ ನಡೆಯುತ್ತಿದೆ. ಹೀಗಿರುವಾಗ, ನಾಯಕತ್ವ ಬದಲಾವಣೆ ಮಾಡಿದರೆ ಕೊರೊನಾಗಿಂದ ದೊಡ್ಡ ಅನಾಹುತ ಸಂಭವಿಸಲಿದೆ ಎಂದು ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಎಚ್ಚರಿಕೆ ನೀಡಿದರು.
READ | ಶಿವಮೊಗ್ಗದಲ್ಲಿ ಮುಂದುವರಿಯಲಿದೆ ಲಾಕ್ಡೌನ್, ಡಿಸಿಗೆ ಫುಲ್ ಪವರ್, ಯಡಿಯೂರಪ್ಪ ಘೋಷಣೆ
ತಾಲೂಕಿನ ಕಾಳೇನಹಳ್ಳಿ ಶಿವಯೋಗಾಶ್ರಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶ್ರೀಗಳ ಆಶೀರ್ವಾದ ಪಡೆದರು.
ಕೇಂದ್ರ ಸರ್ಕಾರ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಮಾಡಬಾರದು. ಇದರಿಂದ ಕೊರೊನಾಗಿಂತ ದೊಡ್ಡ ಅನಾಹುತವಾಗಲಿದೆ ಎಂದು ಸ್ವಾಮೀಜಿ ಎಚ್ಚರಿಸಿದರು.
ಈ ವೇಳೆ, ಶ್ರೀಗಳು ಯಡಿಯೂರಪ್ಪ ಅವರು ರಾಜಕೀಯ ಜೀವನದಲ್ಲಿ ಎದುರಿಸಿದ ಸವಾಲು, ಸಂಕಷ್ಟ ಹಾಗೂ ಸಂಘರ್ಷಗಳನ್ನು ನೆನಪಿಸಿಕೊಂಡರು.