ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಳೆನಾಡಿನಲ್ಲಿ ಮುಂಗಾರಿನ ಆರ್ಭಟ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗದ ವಾತಾವರಣವೇ ಬದಲಾಗಿದೆ. ಅದರಲ್ಲೂ ಮಲೆನಾಡಿನ ತಾಲೂಕುಗಳಾದ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಉತ್ತಮ ಮಳೆಯಾಗುತ್ತಿದೆ.
ಮಳೆ ಕಾಡನ್ನು ಹೊಂದಿರುವ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಕಳೆದ 24 ಗಂಟೆಗಳಲ್ಲಿ 178 ಎಂಎಂ ಮಳೆಯಾಗಿದೆ.
ನೆಟ್ವರ್ಕ್ ಸಮಸ್ಯೆ, ಕರೆಂಟ್ ಕಟ್ | ಮಳೆಯಿಂದಾಗಿ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಿಗದೇ ಜನರು ಪರದಾಡುತ್ತಿದ್ದಾರೆ. ಜತೆಗೆ, ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಕರೆಂಟ್ ಕಡಿತಗೊಂಡು ಸಮಸ್ಯೆಯಾಗಿದೆ.
ನಗರದಲ್ಲೂ ಮಳೆ | ಶಿವಮೊಗ್ಗ ನಗರದಲ್ಲೂ ಮೋಡ ಕವಿದ ವಾತಾವರಣವಿದ್ದು, ಬೆಳಗ್ಗೆಯಿಂದ ಜಿಟಿ ಮಳೆಯಾಗಿದೆ. ಆದರೆ, ಯಾವುದೇ ಅನಾಹುತಗಳ ಬಗ್ಗೆ ವರದಿಯಾಗಿಲ್ಲ.