ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಆತ್ಮನಿರ್ಭರ ಭಾರತ್ ಅಭಿಯಾನದ ಭಾಗವಾಗಿ ‘ಆಪರೇಷನ್ ಗ್ರೀನ್ಸ್’ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಡಿ ಹಣ್ಣು ಮತ್ತು ತರಕಾರಿ ಸಾಗಾಣಿಕೆ ಹಾಗೂ ಶೇಖರಣೆಗಾಗಿ ಸಂಸ್ಕರಣೆದಾರರು, ರೈತರು, ರೈತ ಉತ್ಪಾದಕ ಸಂಸ್ಥೆ ಮತ್ತು ರೈತರ ಗುಂಪು, ವರ್ತಕರು, ಲೈಸನ್ಸ್ ಹೊಂದಿರುವ ಕಮಿಷನ್ ಏಜೆಂಟ್ಸ್, ರಫ್ತುದಾರರು ಹಾಗೂ ಇನ್ನಿತರೆ ಭಾಗಿದಾರರಿಗೆ ಶೇ.50 ರಷ್ಟು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಹಣ್ಣು ಮತ್ತು ತರಕಾರಿ ಬೆಳೆಗಾರರು ವಿಶೇಷವಾಗಿ ಕೋವಿಡ್ ಲಾಕ್ ಡೌನ್ ನಂತಹ ಸಮಯದಲ್ಲಿ ತಾವು ಬೆಳೆದ ಉತ್ಪನ್ನಗಳನ್ನು ಸರಿಯಾಗಿ ಮಾರಾಟ ಮಾಡಲು ಸಾಧ್ಯವಾಗದೇ ಅನುಭವಿಸಿದ ಕಷ್ಟನಷ್ಟಗಳನ್ನು ಹಾಗೂ ಕೋಯ್ಲೋತ್ತರ ನಂತರದ ಉತ್ಪನ್ನಗಳ ನಷ್ಟವನ್ನು ಕಡಿಮೆಗೊಳಿಸುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ.
ಈ ಯೋಜನೆಯ ಮಾರ್ಗಸೂಚಿ ಪ್ರಕಾರ ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಸಾಗಾಣಿಕೆಗೆ ಮತ್ತು ಶೇಖರಣೆಗೆ ಶೇ.50 ರಂತೆ ಸಹಾಯಧನ ನೀಡಲು ಅವಕಾಶವಿರುತ್ತದೆ.
ಜಿಲ್ಲೆಯಲ್ಲಿನ ಹಣ್ಣು ಮತ್ತು ತರಕಾರಿ ಬೆಳೆಗಾರರು ಈ ಯೋಜನೆಯಡಿ ಅರ್ಹ ಬೆಳೆಗಳು, ಸಹಾಯಧನ ಪಡೆಯಲು ಅರ್ಹ ಮಾನದಂಡಗಳು ಮತ್ತು ಅಗತ್ಯವಿರುವ ದಾಖಲಾತಿಗಳು ಇತರೇ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಇಲ್ಲಿಗೆ ಕರೆ ಮಾಡಿ | ಹೆಚ್ಚಿನ ಮಾಹಿತಿಗೆ ತಾಲ್ಲೂಕುವಾರು ತೋಟಗಾರಿಕೆ ಕಚೇರಿ ದೂರವಾಣಿ ಸಂಖ್ಯೆಗಳಾದ ಶಿವಮೊಗ್ಗ 08182-270415, ಭದ್ರಾವತಿ 08282-268239, ಶಿಕಾರಿಪುರ 08187- 223544, ಸೊರಬ 08184- 272112, ಸಾಗರ 08183- 226193, ತೀರ್ಥಹಳ್ಳಿ 08181- 2281514, ಹೊಸನಗರ 08185- 221364 ಕರೆ ಮಾಡಿ.
ಗುಡ್ ನ್ಯೂಸ್ | ಹಾಲು, ತರಕಾರಿ, ದಿನಸಿ ಖರೀದಿಯ ಸಮಯ ಬದಲಾಯಿಸಿ ಆದೇಶ, ಮೇ 2ರಿಂದ ಅನ್ವಯ