ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಆರಂಭ ಮತ್ತು ಟ್ಯಾಬ್ ಪಿ.ಸಿ ವಿತರಣೆ ಮಾಡುತ್ತಿರುವುದು ವಿದ್ಯಾರ್ಥಿಗಳ ಕಲಿಕೆಗೆ ಅತ್ಯಂತ ಅನುಕೂಲವಾಗಲಿದೆ. ಜತೆಗೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿ ಕಲ್ಪಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
https://www.suddikanaja.com/2020/12/26/smart-classes-in-all-government-schools-in-karnataka/
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಯೋಗದಲ್ಲಿ ಏರ್ಪಡಿಸಿದ್ದ ಸ್ಮಾರ್ಟ್ ಕಾಸ್ ರೂಂ ಉದ್ಘಾಟನೆ ಹಾಗೂ ಟ್ಯಾಬ್ ಪಿ.ಸಿ. ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ | ಅಂದಾಜು 163 ಕೋಟಿ ರೂಪಾಯಿ ವೆಚ್ಚದಲ್ಲಿ 436 ಪ್ರಥಮ ದರ್ಜೆ ಕಾಲೇಜುಗಳು, 14 ಎಂಜಿನಿಯರಿಂಗ್ ಕಾಲೇಜುಗಳು, 82 ಪಾಲಿಟೆಕ್ನಿಕ್ ಸೇರಿದಂತೆ 550 ಸಂಸ್ಥೆಗಳಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ಪಿ.ಸಿ ವಿತರಣೆ ಮಾಡಲಾಗುತ್ತಿದೆ ಎಂದರು.
ವಿದ್ಯಾರ್ಥಿಗಳಿಗೆ ಟ್ಯಾಬ್ ಸಹಾಯದಿಂದ ಆನ್ ಲೈನ್ ತರಗತಿ ಹಾಗೂ ಪಿಪಿಟಿ, ಇಮೇಜಸ್, ಆಡಿಯೋ ಇತರೆ ಆಧುನಿತ ತಂತ್ರಜ್ಞಾನದಿಂದ ಕಲಿಕೆ ಸುಲಭವಾಗಲಿದ್ದು, ಶೈಕ್ಷಣಿಕ ಉನ್ನತೀಕರಣಕ್ಕೆ ಅನುಕೂಲವಾಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಭದ್ರ ಬುನಾದಿ ಹಾಕಲು ಇದು ಮೊದಲ ಹೆಜ್ಜೆಯಾಗಿದೆ ಎಂದರು.
ಸಚಿವ ಕೆ.ಎಸ್.ಈಶ್ವರಪ್ಪ ಸ್ಮಾರ್ಟ್ ಕ್ಲಾಸ್ ರೂಂ ಉದ್ಘಾಟಿಸಿದರು. ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಡಿ.ಎಸ್.ಅರುಣ್ ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಧನಂಜಯ್, ಎಂಎಲ್ಸಿ ಎಸ್.ರುದ್ರೇಗೌಡ, ಆರ್. ಪ್ರಸನ್ನಕುಮಾರ್, ಮೇಯರ್ ಸುನೀತಾ ಅಣ್ಣಪ್ಪ, ಸದಸ್ಯರಾದ ಸುರೇಖಾ ಮುರಳೀಧರ, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಉಪಸ್ಥಿತರಿದ್ದರು.
https://www.suddikanaja.com/2021/06/03/control-room-in-all-taluk-places/