ಸುದ್ದಿ ಕಣಜ.ಕಾ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳಿಗೆ ವರದಾನವಾಗಿರುವ ಭದ್ರಾ ಜಲಾಶಯ ಕಾಮಗಾರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಕೊರೊನಾದಲ್ಲಿ ಪಾಸಾದ ಕೈದಿ ಹಾರ್ಟ್ ಅಟ್ಯಾಕ್ ನಲ್ಲಿ ಫೇಲ್, ಭ್ರಷ್ಟಾಚಾರ ಕೇಸ್ ನಲ್ಲಿ ಜೈಲು ಸೇರಿದ ಅಧಿಕಾರಿ ಸಾವು
ಇದನ್ನು ಖಾತ್ರಿ ಪಡಿಸುವುದಕ್ಕಾಗಿಯೇ ರೈತ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಜಲಾಶಯ ಮುಂಭಾಗದಲ್ಲಿಯೇ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವ ಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. 2016-17ರಲ್ಲಿ ಆರಂಭಗೊಂಡ ಕಾಮಗಾರಿ 2018ರಲ್ಲಿ ಪೂರ್ಣಗೊಂಡಿದೆ. ನಂತರ, ಜಲಾಶಯದಿಂದ ನೀರು ಬಿಡುಗಡೆ ಮಾಡಿದಾಗ ಕೊಚ್ಚಿಕೊಂಡು ಹೋಗಿದೆ. ಅಂದಾಜು ಏಳು ಕೋಟಿ ರೂಪಾಯಿ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತಾಗಿದೆ ಎಂದು ಕೆ.ಟಿ.ಗಂಗಾಧರ್ ಆರೋಪಿಸಿದ್ದಾರೆ.
ಅಣೆಕಟ್ಟಿನ ಬುಡದಲ್ಲಿ ಕಾಮಗಾರಿ ವೇಳೆ ತಡೆಗೋಡೆಗೆ ಹಾನಿಯಾಗಿದೆ. ಇದರಿಂದಾಗಿ ನೀರು ಸೋರಿಕೆ ಆಗುತ್ತಿದೆ. ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಅಣೆಕಟ್ಟಿನ ನಾಶವಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದಾರೆ.
ಹೋರಾಟಗಾರರ ಬೇಡಿಕೆ ಏನು | ಕಾಮಗಾರಿ ಹೆಸರಿನಲ್ಲಿ ದೊಡ್ಡ ಅವ್ಯವಹಾರ ನಡೆದಿರುವ ಶಂಕೆ ಇದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಚಿವರು ಗಂಭೀರವಾಗಿ ಪಡಿಗಣಿಸಬೇಕು. ಪ್ರಕರಣದ ಬಗ್ಗೆ ಪೂರ್ಣ ತನಿಖೆ ಕೈಗೊಳ್ಳಬೇಕು. ಜಲಾಶಯದ ಉಳಿವಿಗಾಗಿ ಹೊಸದಾಗಿ ಯಾವ ಕಾಮಗಾರಿಗಳನ್ನು ಮಾಡಬೇಕೆಂದು ನಿರ್ಧರಿಸಬೇಕು.
ಕಳಪೆ ಕಾಮಗಾರಿಯ ಹೊಣೆಯನ್ನು ಗುತ್ತಿಗೆದಾರನ ಮೇಲೆ ಹಾಕಬೇಕು. ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ರೈತ ಸಂಘ ಹೋರಾಟ ನಿಲ್ಲಿಸುವುದಿಲ್ಲ ಎಂದು ವಾರ್ನಿಂಗ್ ನೀಡಿದರು.
ಭದ್ರಾ ಅಭಯಾರಣ್ಯ ಸೇರಿದ ಕಾಡಾನೆ, ಇವತ್ತು ಬೆಳಗ್ಗೆಯಿಂದ ಏನೇನಾಯ್ತು, ಹೇಗಿತ್ತು ಕಾರ್ಯಾಚರಣೆ?