ಸುದ್ದಿ ಕಣಜ.ಕಾಂ
ಸಾಗರ: ಕಾಲು ಜಾರಿ ತಾಳಗುಪ್ಪ ರೈಲು ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಕೈ, ಕಾಲು ಕಳೆದುಕೊಂಡಿರುವ ಯುವಕನನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಸಿದ್ದಾಪುರದ ನವೀನ್ (18) ಎಂಬಾತನೇ ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿ ತೀವ್ರ ಗಾಯಗೊಂಡಿದ್ದ ತಕ್ಷಣ ಆತನಿಗೆ ಸಾಗರದ ಉಪ ವಿಭಾಗ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಈಗ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.