ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುವಾಗ ಆಸ್ಪತ್ರೆಗಳಲ್ಲಿ ಅನಗತ್ಯ ಸಿಟಿ ಸ್ಕ್ಯಾನ್ ಮಾಡುವುದಕ್ಕೆ ಬ್ರೇಕ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಸೂಚನೆ ನೀಡಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾನ್ಸೂನ್ ಪೂರ್ವ ಸಿದ್ಧತೆ, ಕೋವಿಡ್ ನಿರ್ವಹಣೆ ಹಾಗೂ ಪ್ರಮುಖ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅನಗತ್ಯ ಸ್ಕ್ಯಾನ್ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ಅವರು, ಖಾಸಗಿ ಆಸ್ಪತ್ರೆ ವೈದ್ಯರಿಗೆ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಹೇಳಿದರು.
400ಕ್ಕೂ ಅಧಿಕ ಕಂಟೈನ್ಮೆಂಟ್ ಜೋನ್ | ಜಿಲ್ಲೆಯಲ್ಲಿ 400ಕ್ಕೂ ಅಧಿಕ ಕಂಟೈನ್ಮೆಮೆಂಟ್ ಜೋನ್ ಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಎಸ್ಪಿ ಲಕ್ಷ್ಮೀಪ್ರಸಾದ್, ಎಡಿಸಿ ಜಿ.ಅನುರಾಧ ಉಪಸ್ಥಿತರಿದ್ದರು.