ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪೆಟ್ರೋಲ್ ಬೆಲೆಯು ನೂರು ರೂಪಾಯಿ ದಾಟಿದ್ದಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತ್ಯೇಕವಾಗಿ ವಿಭಿನ್ನವಾಗಿ ಬುಧವಾರ ಪ್ರತಿಭಟನೆ ನಡೆಸಿದರು.
https://www.suddikanaja.com/2021/01/16/shivamogga-district-congress-protest-against-bjp/
ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಂದಿ ನಂದಿ ಪೆಟ್ರೋಲ್ ಬಂಕ್ ಮುಂದೆ ಸಾರ್ವಜನಿಕರಿಗೆ ಸಿಹಿ ಹಂಚಿ, ಜಾಗಟೆ ಮತ್ತು ಶಂಖ ಬಾರಿಸಿ ಅಣಕು ಸಂಭ್ರಮ ಪ್ರದರ್ಶಿಸಲಾಯಿತು.
ಇನ್ನೊಂದೆಡೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಿಕೆಟ್ ನಲ್ಲಿ ಸೆಂಚ್ಯೂರಿ ಮಾಡಿದ ಸಂಭ್ರಮದ ಅಣಕು ಪ್ರದರ್ಶಿಸಿ ಸಾರ್ವಜನಿಕರ ಗಮನ ಸೆಳೆದರು.
ಪೆಟ್ರೋಲ್ ಬೆಲೆ ಏರಿಕೆಯಿಂದ ಸಾರ್ವಜನಿಕರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿವೆ. ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಕೂಡಲೇ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಮಹಾನಗರ ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೇಶ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ಪ್ರಮುಖರಾದ ಈ.ಟಿ.ನಿತೀನ್, ಎಸ್.ಕುಮಾರೇಶ್, ಆರ್.ಕಿರಣ್, ಟಿ.ವಿ.ರಂಜಿತ್, ಎಂ.ರಾಹುಲ್, ಸಂದೀಪ್ ಮೊದಲಿಯಾರ್, ವೆಂಕಟೇಶ್ ಕಲ್ಲೂರು, ಯುವ ಕಾಂಗ್ರೆಸ್ ಮುಖಂಡ ಸಿ.ಜಿ. ಮಧುಸೂದನ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕೆ. ಚೇತನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಪ್ರಮುಖರಾದ ಗಿರೀಶ್, ಮೊಹಮ್ಮದ್ ನಿಹಾಲ್, ಬಾಲಾಜಿ, ವಿಜಯ್, ಚಂದೋಜಿರಾವ್, ಅಬ್ದುಲ್ ಸತ್ತಾರ್ ಉಪಸ್ಥಿತರಿದ್ದರು.
https://www.suddikanaja.com/2021/01/28/khandya-cricket-tourney-cancelled-in-chikkamagaluru/