ಸುದ್ದಿ ಕಣಜ.ಕಾಂ
ಶಿವಮೊಗ್ಗ: ಅಡಕೆ ಮತ್ತು ಮುಸುಕಿನ ಜೋಳದ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗೆ ಮೂರು ವರ್ಷ ಕಠಿಣ ಶಿಕ್ಷೆ ಮತ್ತು 50,000 ದಂಡ ವಿಧಿಸಲಾಗಿದೆ. ಒಂದು ವೇಳೆ, ದಂಡ ಕಟ್ಟದೇ ಇದ್ದಲ್ಲಿ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
https://www.suddikanaja.com/2021/02/25/punishment-for-ganja-grower/
ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಮಂಜುನಾಥಾಚಾರಿ (63) ಎಂಬುವವರಿಗೆ ಶಿಕ್ಷೆ ವಿಧಿಸಲಾಗಿದೆ. 2019 ಮೇ 27ರಂದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.
ಘಟನೆ ಹಿನ್ನೆಲೆ | ಹೊಸನಗರ ತಾಲ್ಲೂಕು ನೆವಟೂರು ಗ್ರಾಮದ ಸರ್ವೆ ನಂ17/1ರಲ್ಲಿ ಮುಸುಕಿನ ಜೋಳ ಮತ್ತು ಅಡಕೆ ಸಸಿಗಳ ನಡುವೆ ಗಾಂಜಾ ಬೆಳೆದಿರುವ
ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಇಎನ್ ಪೊಲಿಶ್ ಠಾಣೆ ಇನ್ಸ್ ಪೆಕ್ಟರ್ ಜಿ.ಆರ್. ಸಂಗನಾಥ್, ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ಹಾಗೂ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದರು.
ಕಾರ್ಯಾಚರಣೆಯಲ್ಲಿ 210 ಕೆ.ಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಎನ್.ಡಿ.ಪಿ.ಎಸ್. ಕಾಯ್ದೆ ರಿತ್ಯಾ ಪ್ರಕರಣ ದಾಖಲಿಸಿದ್ದು, ಸಿಇಎನ್ ಕ್ರೈಂ ಪೊಲೀಸ್ ಠಾಣೆ
ಪ್ರಭಾರ ಪಿಎಸ್ಐ ರಾಹತ್ ಆಲಿ ತನಿಖೆ ಕೈಗೊಂಡು ಆರೋಪಿ ನೆವಟೂರು ಗ್ರಾಮದ ಮಂಜುನಾಥಾಚಾರಿ (63) ಹಾಗೂ ದರ್ಶನ್ ಎಂಬುವವರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎ. ಮುಸ್ತಫಾ ಹುಸೇನ್ ವಿಚಾರಣೆ ಪೂರ್ಣಗೊಂಡ ನಂತರ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
https://www.suddikanaja.com/2021/02/12/man-jailed-for-grew-ganja-in-hosanagara/