ಸುದ್ದಿ ಕಣಜ.ಕಾಂ
ಭದ್ರಾವತಿ: ಬಿ.ಎಚ್.ರಸ್ತೆಯಲ್ಲಿರುವ ಲೋಯರ್ ಹುತ್ತಾ ಸಮೀಪದ ವೃತ್ತಕ್ಕೆ ಶ್ರೀ ಕ್ಷೇತ್ರ ಆದಿಚುಂದನಗಿರಿ ಮಹಾಸಂಸ್ಥಾನದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಹೆಸರು ಇಡುವಂತೆ ಒತ್ತಾಯ ಕೇಳಿಬಂದಿದೆ.
ತಾಲೂಕು ಆಟೋ ಚಾಲಕರ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಅವರು ನಗರ ಸಭೆಗೆ ಮನವಿ ಸಲ್ಲಿಸಿದ್ದಾರೆ.
ಲೋಯರ್ ಹುತ್ತಾ ಸೇರಿದಂತೆ ನಗರದ ವಿವಿಧ ವೃತ್ತಗಳಿಗೆ ನಾಮಕರಣ ಮಾಡಲು ನಗರಸಭೆ ಮುಂದಾಗಿದೆ. ಹೀಗಾಗಿ, ಈ ಒತ್ತಾಯ ಕೇಳಿಬಂದಿದೆ. ವೃತ್ತಗಳಿಗೆ ಹೆಸರಿಡುವಾಗ ದೇಶದ ಆದರ್ಶ ವ್ಯಕ್ತಿಗಳನ್ನು ನಾಮಕರಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.