ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ಮಾರುತಿಪುರ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ ಮಕ್ಕಳ ಸಮವಸ್ತ್ರಗಳು ಬೆಂಕಿಗೆ ಆಹುತಿಯಾಗಿವೆ.
2021-22 ಶೈಕ್ಷಣಿಕ ಸಾಲಿನ ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲು ಒದಗಿಸಿದ್ದ 300ಕ್ಕೂ ಅಧಿಕ ಸಮವಸ್ತ್ರಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.
ಕೋವಿಡ್ ಹಿನ್ನೆಲೆ ಹಂಚಿಕೆಯಾಗದ ಸಮವಸ್ತ್ರ | ಕೋವಿಡ್ ಹಿನ್ನೆಲೆ ಮಕ್ಕಳು ಶಾಲೆಗೆ ಬರದ ಕಾರಣ 300ಕ್ಕೂ ಅಧಿಕ ಸಮವಸ್ತ್ರಗಳನ್ನು ದಾಸ್ತಾನು ಮಾಡಲಾಗಿತ್ತು. ಆದರೆ, ಬೆಂಕಿ ಬಿದ್ದು ಸುಟ್ಟು ಕರಕಲಾಗಿವೆ.
ಮುಖ್ಯೋಪಾಧ್ಯರು ಶಾಲೆಯ ಬಾಗಿಲು ತೆಗೆದು ನೋಡಿದಾಗ ಘಟನೆ ನಡೆದಿರುವುದು ಗೊತ್ತಾಗಿದೆ. ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ತನಿಖೆ ನಡೆಯುತ್ತಿದೆ. ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ.