ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನಲ್ಲಿ ಜೂನ್ 7ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಂದು ವಾರದ ಲಾಕ್ಡೌನ್ ಘೋಷಣೆಗೂ ಮುನ್ನವೇ ಸಾಗರದಲ್ಲಿ ಭಾನುವಾರದಿಂದ ಬುಧವಾರದವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಆದರೆ, ಜಿಲ್ಲಾಡಳಿತ ಸೋಮವಾರದವರೆಗೆ ಕಠಿಣ ಲಾಕ್ ಡೌನ್ ಘೋಷಿಸಿರುವುದರಿಂದ ಸಾಗರದಲ್ಲೂ ಈ ನಿಯಮ ಅನ್ವಯವಾಗಲಿದೆ. ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ನಗರ ಸಭೆ ಆವರಣದಲ್ಲಿ ಮಂಗಳವಾರ ಕರೆದಿದ್ದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿ, ಲಾಕ್ಡೌನ್ ವೇಳೆ ಕೃಷಿಕರು ಸೇರಿದಂತೆ ಹಲವರಿಗೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಕೊರೊನಾ ಸೋಂಕು ಹರಡುವುದನ್ನು ತಡೆಯಲು ಇದು ಅನಿವಾರ್ಯವಾಗಿದೆ ಎಂದು ಹೇಳಿದರು. ಸಭೆಯಲ್ಲಿ ಅಧಿಕಾರಿಗಳು ಪಾಲ್ಗೊಂಡಿದ್ದರು.