ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಾಗಿದೆ. ಈ ಮೂಲಕ ಮಧ್ಯ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ನಡುವಿನ ಸಂಪರ್ಕ ಪುನಾರಂಭಗೊಂಡಂತಾಗಿದೆ.
ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಇದಕ್ಕೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಚಾಲನೆ ನೀಡಿದರು.
4 ಕೋಟಿ ವೆಚ್ಚದಲ್ಲಿ ಕಾಮಗಾರಿ | ರಾಜ್ಯ ಹೆದ್ದಾರಿ 52ರ ಹುಲಿಕಲ್ ಘಾಟ್ನಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದೂವರೆ ಕಿಲೋ ಮೀಟರ್ ರಸ್ತೆಗೆ ಕಾಂಕ್ರೀಟ್ ಹಾಕಲಾಗಿದೆ. ಕಳೆದ ಏಪ್ರಿಲ್ ನಲ್ಲಿ ಆರಂಭವಾಗಿದ್ದ ಕಾಮಗಾರಿ ಪೂರ್ಣಗೊಂಡಿದ್ದು, ಸಂಚಾರಕ್ಕೆ ಸಿದ್ಧವಾಗಿದೆ.
ಕಾರಣವೇನು | ಮಳೆಗಾಲದಲ್ಲಿ ಈ ಭಾಗದಲ್ಲಿ ಸುರಿಯುವ ಧಾರಾಕಾರ ನಿರಂತರ ಹುಲಿಕಲ್ ಘಾಟ್ ರಸ್ತೆ ಹಾಳಾಗುತ್ತಲೇ ಇತ್ತು. ಇದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಆಗುತಿತ್ತು. ಈ ಕಾರಣದಿಂದಾಗಿ, ಹುಲಿಕಲ್ ಅರಣ್ಯ ಇಲಾಖೆ ಚೆಕ್ ಪೋಸ್ಟ್ವರೆಗಿನ 800 ಮೀಟರ್, ಘಾಟಿ ಚಂಡಿಕಾಂಬ ದೇಗುಲದ ಮೂಲಕ ಹೇರ್ ಪಿನ್ ತಿರುವುವರೆಗಿನ 700 ಮೀಟರ್ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.