ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ನಗರ ಬಳಿಯ ಕಾಡಿಗ್ಗೇರಿಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಟನ ಮನೆಯವರೇ ಕೊಲೆ ಮಾಡಿರುವುದಾಗಿ ಯುವತಿಯ ತಂದೆ ಆರೋಪಿಸಿದ್ದಾರೆ.
ಸಕಲೇಶಪುರ ತಾಲೂಕಿನ ಗೊಳಗೊಂಡ ಗ್ರಾಮದ ಸೌಂದರ್ಯ(21) ಮೃತಪಟ್ಟಿದ್ದಾಳೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಈಕೆ ಮನೆಯಿಂದ ಕಾಣೆಯಾಗಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಲಾಗಿತ್ತು. ಆಮೇಲೆ, ಈಕೆ ಉಮೇಶ್ ಎಂಬಾತನ ಜತೆ ವಿವಾಹವಾಗಿರುವುದಾಗಿ ತಿಳಿದುಬಂದಿದೆ.
ಗಂಡನ ಮನೆಯವರು ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ತಿಳಿದುಬಂದಿತ್ತು. ಏಕಾಏಕಿ ಸೌಂದರ್ಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯವರು ಕೊಲೆ ಮಾಡಿರುವುದಾಗಿ ಮೃತಳ ತಂದೆ ದೂರು ನೀಡಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.