ಸುದ್ದಿ ಕಣಜ.ಕಾಂ
ಸಾಗರ: ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣದಲ್ಲಿ ಯುವಕನೊಬ್ಬ ಚಲಿಸುತಿದ್ದ ರೈಲಿಗೆ ಸಿಲುಕಿ ಗಾಯಗೊಂಡಿದ್ದಾನೆ.
ಸಿದ್ದಾಪುರದ ನವೀನ್ (18) ಎಂಬಾತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಲಿಸುತ್ತಿದ್ದ ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿದ ಪರಿಣಾಮ ಕಾಲು ಮತ್ತು ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಪ್ಲಾಟ್ ಫಾರಂನಲ್ಲಿ ಕಾಲು ಜಾರಿದ ಕಾರಣದಿಂದಾಗಿ ನವೀನ್ ಚಲಿಸುತ್ತಿದ್ದ ರೈಲಿಗೆ ಸಿಲುಕಿದ್ದಾನೆ ಎಂದು ತಿಳಿದುಬಂದಿದೆ.