ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರದಿಂದ ಜಿಲ್ಲಾಡಳಿತ ಮತ್ತೊಂದು ಹಂತದ ಲಾಕ್ ಡೌನ್ ಜಾರಿಗೆ ತಂದಿದೆ. ಆದರೆ, ಜನಸಂಚಾರಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಿಲ್ಲ.
https://www.suddikanaja.com/2021/06/01/police-securitybin-shivamogga-due-to-lock-down/
ಬೆಳಗ್ಗೆ 6ರಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ, 11 ಗಂಟೆಯಾದರೂ ಜನಸಂಚಾರ ಮಾತ್ರ ಕಡಿಮೆಯಾಗಿಲ್ಲ.
ಅನಗತ್ಯವಾಗಿ ಓಡಾಡುವವರ ಮೇಲೆ ಪೊಲೀಸರು ನಿರಂತರ ದಂಡ ವಿಧಿಸುತ್ತಿದ್ದಾರೆ. ವಾಹನಗಳನ್ನು ಸೀಜ್ ಕೂಡ ಮಾಡುತ್ತಿದ್ದಾರೆ. ಆದರೆ, ವಾಹನಗಳ ಓಡಾಟ ಮಾತ್ರ ಕಡಿಮೆಯಾಗಿಲ್ಲ. ಪರಿಣಾಮ, ನಗರದ ಬಿ.ಎಚ್.ರಸ್ತೆ, ಕುವೆಂಪು ರಸ್ತೆ, ನೆಹರೂ ರಸ್ತೆ, ಸಾಗರ ರಸ್ತೆ, ಆಲ್ಕೋಳ ವೃತ್ತಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ.
ಖಾಕಿ ಗಸ್ತು | ಮಳೆಯನ್ನೂ ಲೆಕ್ಕಿಸದೇ ಪೊಲೀಸರು ಗಸ್ತಿನಲ್ಲಿದ್ದಾರೆ. ಅಶೋಕ ವೃತ್ತ, ಸಾಗರ ರಸ್ತೆ, ನೆಹರೂ ರಸ್ತೆ, ಮಹಾವೀರ ವೃತ್ತ, ಪೊಲೀಸ್ ಚೌಕಿ ಹೀಗೆ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಇದೆ.
ವಾಹನ ಸವಾರರನ್ನು ತಡೆದು ದಾಖಲೆಗಳನ್ನು ಪರಿಶೀಲಿಸಿದ ನಂತರವಷ್ಟೇ ಮುಂದೆ ಹೋಗಲು ಅವಕಾಶ ನೀಡಲಾಗುತ್ತಿದೆ. ಒಂದುವೇಳೆ, ಅನಗತ್ಯವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದರೆ ಅಂತಹ ವಾಹನಗಳನ್ನು ಸ್ಥಳದಲ್ಲೇ ಸೀಜ್ ಮಾಡಲಾಗುತ್ತಿದೆ.
https://www.suddikanaja.com/2021/06/02/tight-security-by-police-due-to-lockdown/