ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಲು ಗ್ರಾಮದ ನಿವಾಸಿ ಭವಾನಿ (85) ಎಂಬುವವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
https://www.suddikanaja.com/2021/06/16/hulikal-ghat-road-ready/
ಗೋಪಾಳ ಮುಖ್ಯ ರಸ್ತೆಯ ನಿವಾಸಿ ನಿತೀನ್ ಎಸ್.ಶೆಟ್ಟಿ(32), ಮೈಸೂರಿನ ಹುಣಸೂರು ಮುಖ್ಯ ರಸ್ತೆ ನಿವಾಸಿ ಶಿವು ಸೋಮಯ್ಯ(36) ಎಂಬುವವರನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 1 ಸಾವಿರ ನಗದು, 1 ರೋಲ್ಡ್ ಗೋಲ್ಡ್ ಸರ, ಕೃತ್ಯಕ್ಕೆ ಉಪಯೋಗಿಸಿದ 1 ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಸದರಿ ಆರೋಪಿಗಳು ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ ಮತ್ತು ಉಡುಪಿ ಪೊಲೀಸ್ ಠಾಣೆಯಲ್ಲಿ 1 ಹಾಗೂ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ 1 ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ.
ಅಂದು ಆಗಿದ್ದೇನು | ಇಬ್ಬರು ಅಪರಿಚಿತರು ಸೇರಿ ಭವಾನಿ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 10 ಗ್ರಾಂ ಬಂಗಾರದ ಸರ, 3 ಸಾವಿರ ರೂಪಾಯಿ ನಗದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು.
ಗಾಯಗೊಂಡಿದ್ದ ಭವಾನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಭವಾನಿ ಅವರ ಮಗ ರಘುರಾಮ್ ಎಂಬುವವರು ದೂರು ನೀಡಿದ್ದರು. ಅದರನ್ವಯ, ತೀರ್ಥಹಳ್ಳಿ ಠಾಣೆಯಲ್ಲಿ ಕಲಂ 302, 397 ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ ತೀರ್ಥಹಳ್ಳಿ ಪೊಲೀಸ್ ಠಾಣೆ ಪಿಐ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.
https://www.suddikanaja.com/2021/05/27/no-street-light-un-scientific-waste-management/