ಸುದ್ದಿ ಕಣಜ.ಕಾಂ
ಸಾಗರ: ಸಾಗುತ್ತಿದ್ದ ಲಾಂಚ್ ನಿಂದ ಶರಾವತಿ ಹಿನ್ನೀರಿಗೆ ಜಿಗಿದ ಮಹಿಳೆಯೊಬ್ಬರನ್ನು ರೋಚಕ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿದೆ.
ಬೆಂಗಳೂರಲ್ಲಿ ಶರಾವತಿ ಸಂತ್ರಸ್ತರ ಬಗ್ಗೆ ನಡೀತು ಮೀಟಿಂಗ್, ಏನೆಲ್ಲ ಚರ್ಚೆ ಆಯ್ತು?
ಹಾವೇರಿ ಜಿಲ್ಲೆಯ ಹಿರೇಕೆರೂರು ಗ್ರಾಮದ ರೇಣುಕಾ(46) ಎಂಬುವವರನ್ನು ರಕ್ಷಿಸಲಾಗಿದೆ. ಮಹಿಳೆಯು ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದೇ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಅಧಿಕ ನೀರು ಇರುವುದನ್ನು ಲೆಕ್ಕಿಸದೇ ರಕ್ಷಣಾ ಕಾರ್ಯ ಮಾಡಲಾಗಿದೆ.
ಶರಾವತಿ ನದಿಯ ಜಲಾನಯನ ಪ್ರದೇಶದಲ್ಲಿ ವಿಪರೀತ ಮಳೆಯಾಗಿದ್ದು, ಹಿನ್ನೀರಿನಲ್ಲಿ ಸಾಕಷ್ಟು ಪ್ರಮಾಣದ ನೀರಿದೆ. ಇದ್ಯಾವುದನ್ನೂ ಲೆಕ್ಕಿಸದೇ ರಕ್ಷಣೆ ಮಾಡಲಾಗಿದೆ.
ದರ್ಶನ ಪಡೆದು ಬರುವಾಗ ಆತ್ಮಹತ್ಯೆಗೆ ಯತ್ನ | ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನ ಪಡೆದು ವಾಪಸ್ ಬರುತ್ತಿದ್ದ ಮಹಿಳೆ ಲಾಂಚ್ ಹಿನ್ನೀರಿನ ಮಧ್ಯ ಭಾಗದಲ್ಲಿ ಬರುತ್ತಿದ್ದಂತೆಯೇ ನೀರಿಗೆ ಹಾರಿದ್ದಾರೆ. ಇದನ್ನು ನೋಡಿದ ಜನ ಭಯಕ್ಕೆ ಒಳಗಾಗಿದ್ದಾರೆ. ತಕ್ಷಣ ಸ್ಥಳೀಯರಾದ ಪ್ರಕಾಶ್ ಸುಧಾಕರ್ ಮತ್ತು ಲಾಂಚ್ ಸಿಬ್ಬಂದಿ ಗಜಕೋಶ, ಮಂಜುನಾಥ್ ಎಂಬುವವರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಲೈಫ್ ಜಾಕೆಟ್ ಧರಿಸಿ ರಕ್ಷಣೆ ಕಾರ್ಯ | ಪ್ರಕಾಶ್ ಅವರು ಸೇಫ್ಟಿ ಜಾಕೆಟ್ ತೊಟ್ಟು ಹಿನ್ನೀರಿಗೆ ಇಳಿದು ರೇಣುಕಾ ಅವರನ್ನು ನೀರಿನಿಂದ ಲಾಂಚ್ ಗೆ ಕರೆದುಕೊಂಡು ಬಂದಿದ್ದಾರೆ. ಪ್ರಜ್ಞೆ ತಪ್ಪಿದ್ದ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮಹಿಳೆಯು ಆತ್ಮಹತ್ಯೆಗೆ ಯತ್ನಿಸಿದ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ, ಈ ಹಿಂದೆಯೂ ಮಾಡಿದ್ಳು ಆತ್ಮಹತ್ಯೆ ಯತ್ನ