ಸುದ್ದಿ ಕಣಜ.ಕಾಂ
ಶಿವಮೊಗ್ಗ: 2021-22 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆಗಳ ಘೋಷಣೆ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ರೈತರು ಘೋಷಿತ ಬೆಳೆಗಳ ವಿಮೆ ನೋಂದಣಿಗೆ ಜಂಟಿ ಕೃಷಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.
READ | ಖಾಸಗಿ ಬಸ್ ಸಂಚಾರ ಪುನರಾರಂಭ, ಹೇಗಿದೆ ಮೊದಲ ದಿನ, ಯಾವ ಮಾರ್ಗಕ್ಕೆ ಬಸ್ ಲಭ್ಯ?
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ (ಮಳೆ ಆಶ್ರಿತ) ಹಾಗೂ ಜೋಳ (ಮಳೆ ಆಶ್ರಿತ) ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ (ನೀರಾವರಿ/ ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆ ಆಗಿರುತ್ತವೆ.
https://www.suddikanaja.com/2020/12/21/health-insurance-to-memcos-members-shivamogga/
ಜಿಲ್ಲೆಯಲ್ಲಿ ಬೆಳೆ ವಿಮೆ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಸೂಚಿಸಲಾಗಿದೆ. ನೋಂದಣಿಗೆ ಆಗಸ್ಟ್ 16 ಅಂತಿಮ ದಿನವಾಗಿದೆ.
ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗಾಗಿ ನೋಂದಾಯಿಸಿಕೊಳ್ಳುವಂತೆ ಕೋರಿದೆ. ಬಿತ್ತನೆಗೂ ಮುಂಚೆಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ.
ಏಳು ದಿನಗಳೊಳಗೆ ಲಿಖಿತ ಅರ್ಜಿ ನೀಡಿ | ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆ ಅಡಿ ಕಡ್ಡಾಯವಾಗಿ ಒಳಪಡಿಸಲಾಗುವುದು. ತದ ನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು ಎಂದು ಹೇಳಿದ್ದಾರೆ.
ಈ ದಾಖಲೆ ಕೊಡಿ | ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್, ಆರ್ಥಿಕ ಸಂಸ್ಥೆಗಳು, ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (CSC) ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. http://samrkshane.karnataka.gov.in ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದು.
https://www.suddikanaja.com/2020/12/16/crop-survey-application-for-farmers/