ಸುದ್ದಿ ಕಣಜ.ಕಾಂ
ಶಿವಮೊಗ್ಗ: ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತುಂಗಾನಗರ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.
ಗೋಪಾಳದಲ್ಲಿರುವ ಶ್ರೀರಾಮನಗರ ಬಡಾವಣೆಯಲ್ಲಿ ನಾಲ್ವರು ಗಾಂಜಾ ಮಾರಾಟ ಮಾಡುತ್ತಿದ್ದಾಗ ಡಿವೈಎಸ್ಪಿ ಪ್ರಶಾಂತ್ ಮುನ್ನೊಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ, ಮೂವರು ಆರೋಪಿಗಳು ರೆಡ್ ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿದ್ದಾರೆ.
ಬಂಧಿತ ಆರೋಪಿಗಳು | ಬಂಧಿತರೆಲ್ಲರೂ ಟಿಪ್ಪುನಗರದವರಾಗಿದ್ದಾರೆ. ಸುಹೇಲ್ ಖಾನ್(24), ಅಯೂಬ್ ಖಾನ್(21) ಮತ್ತು ಅಮ್ಜದ್ (20) ಬಂಧಿಸಿದ್ದು, ಅವರಿಂದ 30 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ 350 ಗ್ರಾಂ ಒಣ ಗಾಂಜಾ, 870 ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.
ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.