ಸುದ್ದಿ ಕಣಜ.ಕಾಂ
ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಪ್ರಾಧಿಕಾರದ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
BREAKING NEWS | ಮೀನು ಹಿಡಿಯಲು ಹೋಗಿ ತುಂಗಾ ನದಿಗೆ ಬಿದ್ದು ಯುವಕ ಸಾವು
ಸಭೆಯಲ್ಲಿ ಅಧ್ಯಕ್ಷರು, ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಯ ಮುಖಾಂತರ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಸ್ತುತ ಮಳೆಗಾಲದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದಿರುವ ಕಾರಣ ಮುಂದಿನ ದಿನಗಳ ಪರಿಸ್ಥಿತಿಯನ್ನು ಗಮನದಲ್ಲಿ ಇರಿಸಿಕೊಂಡು ಹಾಗೂ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತ ದೃಷ್ಟಿಯಿಂದ ಸರ್ಕಾರಕ್ಕೆ ಪತ್ರ ಬರೆದು ವಸ್ತುಸ್ಥಿತಿಯ ಕುರಿತು ವಿವರಣೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತುಂಗಾ ಮತ್ತು ಭದ್ರಾ ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಕೈಗೊಂಡಿರುವ ನಾಲೆಗಳ ದುರಸ್ತಿ ಕಾಮಗಾರಿಗಳು, ಪ್ರಸ್ತುತ ನಾಲೆಗಳ ಸ್ಥಿತಿಗತಿ, ನಾಲೆ ಪಿಕಪ್ ಹಾಗೂ ಗೇಟ್, ನಾಲೆಗಳಲ್ಲಿ ತುಂಬಿರುವ ಹೂಳು ಮತ್ತು ನಾಲೆಯ ಸುತ್ತ ಬೆಳೆದುಕೊಂಡಿರುವ ಜಂಗಲ್ ತೆಗೆದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ನಾಲೆ ಏರಿ ರಸ್ತೆ ಕಾಮಗಾರಿ ಮತ್ತು ತುರ್ತಾಗಿ ಆಗಬೇಕಿರುವ ರಸ್ತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ನಿರ್ದೇಶನ ನೀಡಿದರು.
ಸಭೆಯಲ್ಲಿ ಆಡಳಿತಾಧಿಕಾರಿ ಕೃಷ್ಣಮೂರ್ತಿ ಕುಲಕರ್ಣಿ, ಭದ್ರಾ ಯೋಜನಾ ವೃತ್ತ ಅಧೀಕ್ಷಕ ಎಂಜಿನಿಯರ್ ಚಂದ್ರಹಾಸ್, ತುಂಗಾ ಮೇಲ್ದಂಡೆ ಯೋಜನಾ ವಲಯ ಅಧೀಕ್ಷಕ ಎಂಜಿನಿಯರ್ ರಮೇಶ್ ಉಪಸ್ಥಿತರಿದ್ದರು.
ತುಂಗಾ ಕಾಲುವೆ ಎರಡೂ ಬದಿ ತಲೆ ಎತ್ತಲಿವೆ 70 ಸಾವಿರ ವೃಕ್ಷ, ಏನಿದು ಪ್ರಾಜೆಕ್ಟ್?