ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂಪಾಯಿ ನೆರವು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಕಾರ್ಮಿಕರಿಗೆ ಶುಭ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ, ಏನದು? ಇಲ್ಲಿದೆ ಮಾಹಿತಿ
ಶನಿವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೆ ಜಿಲ್ಲೆಯಲ್ಲಿ 72,065 ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಒಟ್ಟು 21.61 ಕೋಟಿ ರೂಪಾಯಿ ವರ್ಗಾವಣೆ ಮಾಡಲಾಗಿದೆ. ಇವರ ಪೈಕಿ 11,040 ಕಾರ್ಮಿಕರಿಗೆ ಜಮಾಗೊಳಿಸಲಾದ ಮೊತ್ತ ಅವರ ಖಾತೆಗಳು ನಿಷ್ಕ್ರಿಯವಾಗಿರುವುದರಿಂದ ಹಾಗೂ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಜೋಡಣೆ ಆಗದಿರುವ ಕಾರಣ 3.31 ಕೋಟಿ ರೂಪಾಯಿ ಇನ್ನೂ ಜಮಾ ಆಗಿಲ್ಲ. ಕಾರ್ಮಿಕರು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ಸಿಗಲಿದೆ ಫುಡ್ ಕಿಟ್, ಯಾವಾಗಿಂದ ವಿತರಣೆ, ಕಿಟ್ನಲ್ಲಿ ಏನೇನಿದೆ?
ಆಹಾರ ಕಿಟ್ ವಿತರಣೆ | ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ನೆರವಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 32 ವಾರ್ಡ್ ಗಳಲ್ಲಿರುವ 10,850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್ ನಲ್ಲಿ ಆಹಾರ ಕಿಟ್ ಒದಗಿಸಲಾಗುವುದು.
ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಆಹಾರ ಕಿಟ್ ವಿತರಣೆ ಮಾಡಲಾಗುವುದು. ಆಹಾರ ಕಿಟ್ ಕಾರ್ಮಿಕರಿಗೆ ವಿತರಿಸಲು ಅನುಕೂಲವಾಗುವಂತೆ 9 ತಂಡಗಳನ್ನು ರಚಿಸಲಾಗಿದೆ. 32 ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು.
ಈ 18 ಸೇವೆ ಪಡೆಯಲು ಇನ್ಮುಂದೆ ಆರ್.ಟಿ.ಒ ಕಚೇರಿಗೆ ಹೋಗಬೇಕಾಗಿಲ್ಲ, ಯಾವ್ಯಾವ ಸೇವೆ ಲಭ್ಯ?