ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲ್ಲೂಕು ಮೆಸ್ಕಾಂ ಕುಂಸಿ ಉಪ ವಿಭಾಗ ಕಚೇರಿ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಬಹುದು.
READ | ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಿದ ಪೊಲೀಸರು, ಎಲ್ಲಿ ನಡೀತು ಕಾರ್ಯಾಚರಣೆ?
ವಿದ್ಯುತ್ ಸೌಲಭ್ಯ ಅವಶ್ಯವಿರುವ ಕುಂಸಿ, ಹಾರನಳ್ಳಿ, ಆಯನೂರು ಹಾಗೂ ಶ್ರೀರಾಂಪುರ ಶಾಖಾ ವ್ಯಾಪ್ತಿಯಲ್ಲಿನ ರೈತರು ಜುಲೈ 17 ರಿಂದ ಆಗಸ್ಟ್ 13 ರೊಳಗೆ ಕುಂಸಿ ಉಪವಿಭಾಗ, ಮೆಸ್ಕಾಂ ಕಚೇರಿಯಲ್ಲಿ ಪೂರ್ಣ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ ದಿನಾಂಕದೊಳಗೆ ಮೆಸ್ಕಾಂ ನಿಗಮದ ತಾಂತ್ರಿಕ ಕಾರ್ಯ ಸಾಧ್ಯತೆ ಪರಿಶೀಲಿಸಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅನುಮೋದನೆಯ ನಂತರ ಆದ್ಯತೆಯ ಮೇರೆಗೆ ವಿದ್ಯುತ್ ಸೌಲಭ್ಯ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೆಸ್ಕಾಂ ಕುಂಸಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.