ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.14 ಮತ್ತು 15 ರಂದು ಅಣಕು ಪರೀಕ್ಷೆ ನಡೆಸಲು ಸೂಚಿಸಿದೆ ಎಂದು ಡಿಡಿಪಿಐ ಎನ್.ಎಂ.ರಮೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಕುರಿತಾದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದರು.
https://www.suddikanaja.com/2021/07/13/sslc-exams-during-covid/
ಅಣಕು ಪರೀಕ್ಷೆ ಕಡ್ಡಾಯವಲ್ಲ ಎಂಬುದನ್ನು ಸೂಚಿಸಿದೆ. ಆದ್ದರಿಂದ, ಸ್ವಯಂ ಆಸಕ್ತಿಯಿಂದ ಪರೀಕ್ಷೆ ಬರೆಯಲು ಮುಂದೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಬರೆಸಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಎಸ್.ಓ.ಪಿ ಪ್ರಕಾರ ಮಾಹಿತಿಯನ್ನು ನೀಡಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.
ಜುಲೈ 19 ಮತ್ತು 22 ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 150 ಪರೀಕ್ಷಾ ಕೇಂದ್ರಗಳು ಮತ್ತು ಹೆಚ್ಚುವರಿಯಗಿ 16 ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. 24,771 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. 61 ಮಾರ್ಗಾಧಿಕಾರಿಗಳು, 150 ಸ್ಥಾನಿಕ ಜಾಗೃತ ದಳ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
https://www.suddikanaja.com/2021/01/20/education-minister-suresh-kumar-discussion-in-shivamogga/
ಲಸಿಕೆ ಮತ್ತು ಕೋವಿಡ್ ಪರೀಕ್ಷೆ ಕಡ್ಡಾಯ | ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು. ಆ ಸಂದರ್ಭಕ್ಕೆ ಅನುಗುಣವಾಗಿ ಆರ್.ಎ.ಟಿ ಅಥವಾ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಪಾಸಿಟಿವ್ ಬಂದರೆ ಅಂತಹವರು ಪರೀಕ್ಷೆ ವೇಳೆ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ. ಬದಲಿ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕಾರ್ಯಕ್ಕೆ 3,967 ಸಿಬ್ಬಂದಿಗಳನ್ನು ನಿಯೋಜಿಸಿದ್ದು ಇವರೆಲ್ಲರೂ ಪ್ರಥಮ ಡೋಸ್ ಲಸಿಕೆ ಪಡೆದಿದ್ದು ಈ ಪೈಕಿ 746 ಎರಡನೇ ಡೋಸ್ ಸಹ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಿಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ, ಡಿಡಿಪಿಐ ಎನ್.ಎಂ.ರಮೇಶ್, ಎಡಿಸಿ ಅನುರಾಧ, ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ, ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿ ಎಚ್.ಆರ್.ಕೃಷ್ಣಮೂರ್ತಿ ಇತರರು ಹಾಜರಿದ್ದರು.
https://www.suddikanaja.com/2021/06/09/congress-protest-against-petrol-rate-hike/