ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಿಸಿರುವ ವಿರುದ್ಧ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬುಧವಾರ ಭಾರಿ ಕೋಲಾಹಲವೇ ಸೃಷ್ಟಿಯಾಗಿತ್ತು.
https://www.suddikanaja.com/2021/06/04/property-tax-collection-door-to-door-by-online/
ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ.ಯೋಗೇಶ್, ರಮೇಶ್ ಹೆಗಡೆ ಅವರು ಆಸ್ತಿ ತೆರಿಗೆ ಸಾರ್ವಜನಿಕರಿಗೆ ಹೊರೆಯಾಗಿದೆ ಎಂದು ಆರೋಪಿಸಿದರು
ವಿರೋಧ ಪಕ್ಷದವರು ಮೇಯರ್ ಟೇಬಲ್ ಮುಂಭಾಗದಲ್ಲಿ ಪ್ರತಿಭಟನೆಗಿಳಿದರು. ಕೊರೊನಾ ಕಾಲದಲ್ಲಿ ಈ ರೀತಿ ಆಸ್ತಿ ತೆರಿಗೆ ಏರಿಕೆ ಮಾಡಿರುವುದರಿಂದ ಭಾರಿ ಸಮಸ್ಯೆಯಾಗಿದೆ. ಇದನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಸ್ತಿ ತೆರಿಗೆಯ ವಿಚಾರವನ್ನು ಪುನರ್ ಪರಿಶೀಲನೆ ಮಾಡುವಂತೆ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
ಪ್ರಧಾನಿ ವಿರುದ್ಧ ವಾಗ್ದಾಳಿ, ಸಭೆಯಲ್ಲಿ ಆರೋಪ ಪ್ರತ್ಯಾರೋಪ | ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಪಾಲಿಕೆಯ ಕಾಂಗ್ರೆಸ್ ಸದಸ್ಯ ಎಚ್.ಸಿ.ಯೋಗೇಶ್ ಆರೋಪಿಸಿದರು. ಅದಕ್ಕೆ ಬಿಜೆಪಿ ಸದಸ್ಯರು ಕೆಂಡಾಮಂಡಲಗೊಂಡರು. ಆಸ್ತಿ ತೆರಿಗೆಯ ಬಗ್ಗೆ ಆರ್ಥಿಕ ತಜ್ಞರು ಚರ್ಚಿಸಿ ಸಲಹೆ ನೀಡಿದ್ದಾರೆ. ಇದು ಪಕ್ಷದ ವಿಚಾರವಲ್ಲ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಪಾಲಿಕೆ ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ್ ವಟಾರೆ ಉಪಸ್ಥಿತರಿದ್ದರು.
https://www.suddikanaja.com/2021/02/02/hunasodu-blast-investigation-by-revenue-commissioner/