ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೆಂಗಳೂರಿನ ವಿದ್ಯಾನಗರದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಕರೆಯಲಾಗಿದೆ.
ಖೇಲೋ ಇಂಡಿಯಾ ಯೋಜನೆ ಅಡಿ ಮಲೆನಾಡಿಗೆ ಬರಲಿದೆ ಕ್ರೀಡಾ ಗ್ರಾಮ, ಸೆಂಟ್ರಲ್ ಟೀಂ ಪರಿಶೀಲನೆ, ಇನ್ನೇನಾಯ್ತು?
ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬರುವ ಕೇಂದ್ರವನ್ನು ರಾಜ್ಯ ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದೆ.
ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳ ಅನುಸಾರ ಗುತ್ತಿಗೆ ಆಧಾರದಲ್ಲಿ ಹೈ ಪರ್ಫಾರ್ಮೆನ್ಸ್, ಹೆಡ್ ಕೋಚ್ (ಸ್ವಿಮಿಂಗ್, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಹಾಗೂ ಯಂಗ್ ಪ್ರೊಫೆಷನಲ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು #AnanthnagforPadma ಅಭಿಯಾನ, ಘಟಾನುಘಟಿ ಸಿನಿ ತಾರೆಯರಿಂದ ಸಪೋರ್ಟ್
ಅರ್ಜಿಗಳನ್ನು ಹೀಗೆ ಸಲ್ಲಿಸಿ | ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಜುಲೈ 20ರೊಳಗಾಗಿ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.