ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪಶುಪಾಲಕರು, ರೈತರು, ಜಾನುವಾರು ಸಾಕಾಣಿಕೆಯಲ್ಲಿ ತೊಡಗಿರುವವರಿಗೆ ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ಜಿಲ್ಲೆಗೆ 10 ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಒಂದರಂತೆ ಒಟ್ಟು 41 ಆಂಬ್ಯುಲೆನ್ಸ್ಗಳನ್ನು ನೀಡಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
https://www.suddikanaja.com/2021/06/27/woman-tried-to-suicide-in-sharavathi-back-water/
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪಶುಪಾಲನಾ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಂಬ್ಯುಲೆನ್ಸ್ ಸೇವೆಯನ್ನು ದೇಶದಲ್ಲಿಯೇ ಮೊಟ್ಟ ಮೊದಲು ಅನುಷ್ಠಾನಗೊಂಡಿರುವುದು ಕರ್ನಾಟಕದಲ್ಲಿ ಎಂದರು.
1962 ಹೆಲ್ಪ್ ಲೈನ್ | ಜಾನುವಾರುಗಳಿಗೆ ಸಕಾಲದಲ್ಲಿ ಅಗತ್ಯ ಸೇವೆ ನೀಡಲು ಅನುಕೂಲವಾಗುವಂತೆ 1962ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಅರ್ಹ ರೈತರು ಈ ಸಂಖ್ಯೆಗೆ ಉಚಿತವಾಗಿ ಕರೆ ಮಾಡಿ ಪಶುವೈದ್ಯ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. ಈ ವಾಹನ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲಿದೆ. ರೈತರ ಅಗತ್ಯಗಳಿಗೆ ಸಂಚಾರಿ ಪಶು ಆಸ್ಪತ್ರೆ ಮನೆ ಬಾಗಿಲಿಗೆ ತೆರಳಿ ಸೇವೆ ನೀಡಲಿದೆ. ಈ ಆಂಬ್ಯುಲೆನ್ಸ್ನಲ್ಲಿ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್, ತುರ್ತು ಚಿಕಿತ್ಸಾ ಘಟಕದೊಂದಿಗೆ ಅಗತ್ಯ ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.
https://www.suddikanaja.com/2021/06/01/corona-patient-jump-from-ambulance/