ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಪ್ರಮುಖ ರಸ್ತೆಗಳಲ್ಲಿನ ಗುಂಡಿಗಳನ್ನು ಮಹಾನಗರ ಪಾಲಿಕೆಯಿಂದ ಸೋಮವಾರ ಮುಚ್ಚಲಾಗುತ್ತಿದೆ.
ನಗರದ ರಾಘವೇಂದ್ರ ಸ್ವಾಮಿ ಮಠ, ತಿಲಕ್ ನಗರ ರಸ್ತೆಗಳಲ್ಲಿನ ಗುಂಡಿಗಳನ್ನು ಎಂ ಸ್ಯಾಂಡ್ ಹಾಕಿ ಮುಚ್ಚಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳಿಂದಾಗಿರುವ ಗುಂಡಿಗಳನ್ನು ಮುಚ್ಚಲಾಗುತ್ತಿದೆ.
ಸ್ಮಾರ್ಟ್ ಸಿಟಿ ಕಾಮಗಾರಿ ಹಿನ್ನೆಲೆ ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವೆಡೆ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ, ರಸ್ತೆಗಳನ್ನು ಅಗೆದು ಗುಂಡಿಗಳನ್ನು ಹಾಗೆಯೇ ಬಿಡಲಾಗಿದೆ. ಮಳೆಯಿಂದಾಗಿ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ.
ಸುದ್ದಿ ಕಣಜ ವರದಿ ಪ್ರಕಟಿಸಿತ್ತು | ಹಲವು ಕಡೆಗಳಲ್ಲಿ ಮಳೆಯ ನೀರು ಆವೃತವಾಗಿ ಗುಂಡಿ ಇರುವುದೇ ಕಾಣದ ಸ್ಥಿತಿ ಇದೆ. ಈ ಬಗ್ಗೆ ‘ಸುದ್ದಿ ಕಣಜ.ಕಾಂ’ ಜುಲೈ 11ರಂದು ಈ ಬಗ್ಗೆ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತು ಪಾಲಿಕೆಯಿಂದ ಗುಂಡಿ ಮುಚ್ಚುವ ಕಾರ್ಯ ಆರಂಭಗೊಂಡಿದೆ.