ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ವೇದ, ಆಗಮ ಪಾಠ ಶಾಲೆ ಆರಂಭಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಒತ್ತಾಯಿಸಿದೆ.
ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಬುಧವಾರ ಶಿವಮೊಗ್ಗ ನಗರಕ್ಕೆ ಬಂದಾಗ ಮನವಿ ಪತ್ರ ಸಲ್ಲಿಸಲಾಗಿದೆ.
ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆ ಮತ್ತು ತಾಲೂಕುಗಳಲ್ಲಿ ವೇದ, ಆಗಮಶಾಸ್ತ್ರ ಅಭ್ಯಾಸ ಮಾಡಲು ಅನೇಕ ಆಕಾಂಕ್ಷಿಗಳಿದ್ದಾರೆ. ಇದಕ್ಕೆ ಸೂಕ್ತ ಪಾಠ ಶಾಲೆ ಸಮೀಪದಲ್ಲಿ ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳು ಬೇರೆಯ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಒಕ್ಕೂಟದ ಜಿಲ್ಲಾಧ್ಯಕ್ಷ ಮಿಥುನ್ ಕೆ.ಅಯ್ಯಂಗಾರ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಭಾರದ್ವಾಜ್ ಉಪಸ್ಥಿತರಿದ್ದರು.