ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾ ಜಲಾಶಯದಿಂದ ಜುಲೈ 23ರ ಮಧ್ಯರಾತ್ರಿಯಿಂದ ಎಡ ಮತ್ತು ಬಲ ನಾಲಾಗಳಿಗೆ ನೀರು ಹರಿಸಲು ಉದ್ದೇಶಿಸಲಾಗಿತ್ತು. ಆದರೆ, ಇದನ್ನು ಭದ್ರಾ ಕಾಡಾ ತಾತ್ಕಾಲಿಕವಾಗಿ ಮುಂದೂಡಿದೆ.
https://www.suddikanaja.com/2021/07/16/water-from-bhadra-right-and-left-canal/
ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಅತಿ ಹೆಚ್ಚಿನ ವರ್ಷಧಾರೆಯ ಕಾರಣ ನಾಲೆಗಳಿಗೆ ಹರಿಸುವ ನೀರನ್ನು ತಾತ್ಕಾಲಿಕವಾಗಿ ಮುಂದೂಡಿರುವುದಾಗಿ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದೂಡಿಕೆಗೆ ಕಾರಣವೇನು | ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ವರ್ಷಧಾರೆ ಆಗುತ್ತಿದೆ. ಇದರಿಂದಾಗಿ ಕೆರೆ, ಹಳ್ಳ, ನಾಲೆಗಳು ತುಂಬಿ ಹರಿಯುತ್ತಿವೆ. ಈ ಸಮಯದಲ್ಲಿ ನಾಲೆಗಳಿಗೆ ನೀರು ಹರಿಸಿದರೆ ರೈತರ ಜಮೀನುಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿ ಬೆಳೆ ನಷ್ಟ ಅನುಭವಿಸುವ ಸಂಭವ ಇದೆ. ಹಾಗೂ ಮುಂದಿನ ಬೇಸಿಗೆ ಬೆಳೆಗಳಿಗೆ ಅಚ್ಚುಕಟ್ಟು ಭಾಗದ ರೈತರಿಗೆ ಯಾವುದೇ ತೊಂದರೆಯಾಗದಂತೆ ನೀರು ಕೊಡುವ ಸುದುದ್ದೇಶದಿಂದ ಮಳೆಯ ಪ್ರಮಾಣ ಆಧರಿಸಿ ನಾಲೆಗಳಿಗೆ ನೀರು ಹರಿಸುವ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು | ಜುಲೈ 15ರಂದು ರಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಪವಿತ್ರಾ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಜುಲೈ 23ರ ಮಧ್ಯರಾತ್ರಿಯಿಂದ ನೀರು ಹರಿಸಲು ನಿರ್ಧರಿಸಲಾಗಿತ್ತು. ಅದರಂತೆ,
ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ 2021-22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಎಡ ಮತ್ತು ಬಲ ನಾಲಾ, ಆನವೇರಿ ಶಾಖಾ ನಾಲಾ, ದಾವಣಗೆರೆ ಶಾಖಾ ನಾಲಾ, ಮಲೆಬೆನ್ನೂರು ಶಾಖಾ ನಾಲಾ ಮತ್ತು ಹರಿಹರ ಶಾಖಾ ನಾಲೆಗಳಿಗೆ ನೀರು ಹರಿಸುವ ಸಂಬಂಧ ಹಾಗೂ ಬೆಳೆ ಕ್ಷೇತ್ರವನ್ನು ಪ್ರಕಟಿಸುವ ಒಮ್ಮತದಿಂದ ತೀರ್ಮಾನ ಕೈಗೊಳ್ಳಲಾಗಿತ್ತು.
https://www.suddikanaja.com/2020/12/28/request-to-bhadra-cada-president-pavitra-ramaiah-to-provide-bhadra-left-canal-water/