ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ನಗರದಲ್ಲಿ ತುಂಗೆ ಸೃಷ್ಟಿಸಿದ ಅನಾಹುತ, 2 ಮನೆ ಗೋಡೆ ಕುಸಿತ, ಎಲ್ಲೆಲ್ಲಿ ಏನಾಗಿದೆ?
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅತಿವೃಷ್ಟಿಯಿಂದ ಶಿವಮೊಗ್ಗ ನಗರದ ಸುಮಾರು 15 ಭಾಗಗಳಲ್ಲಿ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿತ್ತು. ಆದರೆ, ಈ ಬಾರಿ ಮುಂಗಾರು ಆಗಮನಕ್ಕಿಂತ ಮೊದಲೇ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡು, ರಾಜಕಾಲುವೆಗಳನ್ನು ಸ್ವಚ್ಛಗೊಳಿಸಲಾಗಿದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ನಗರದಲ್ಲಿ ಯಾವುದೇ ಮನೆಗಳು ಬಿದ್ದಿಲ್ಲ ಎಂದು ಹೇಳಿದರು.
READ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ, ರಾತ್ರೋರಾತ್ರಿ ಮೂರಡಿ ಏರಿಕೆ
ನಗರದ ನಾಲ್ಕು ಕಡೆ ನುಗ್ಗಿದ ನೀರು | ನಗರದ ನಾಲ್ಕು ಕಡೆಗಳಲ್ಲಿ ನೀರು ನುಗ್ಗಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ. ನಗರದಲ್ಲಿ ನಾಲ್ಕು ಕಡೆಗಳಲ್ಲಿ ತಾತ್ಕಾಲಿಕವಾಗಿ ಅತಿವೃಷ್ಟಿ ಪೀಡಿತರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹಾನಿಗೆ ಪರಿಹಾರ ನೀಡುವುದು ಸೇರಿದಂತೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ಮಂಗಳವಾರ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.
ಸಚಿವರು ನಗರದ ಇಮಾಮ್ ಬಡಾ, ಶಾಂತಮ್ಮ ಲೇಔಟ್ ಮತ್ತು, ಕುಂಬಾರಗುಂಡಿ ಪ್ರದೇಶಗಳಿಗೆ ಸಚಿವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.