ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಆಕ್ರೋಶ ಭುಗಿಲೆದ್ದಿದೆ.
ಕಳೆದ ಕೆಲವು ದಿನಗಳಿಂದ ಸಿಎಂ ಬದಲಾವಣೆಯ ವಿಚಾರ ಭಾರಿ ಮುನ್ನೆಲೆಯಲ್ಲಿತ್ತು. ಆದರೂ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಇನ್ನಷ್ಟು ದಿನಗಳ ಕಾಲಾವಕಾಶ ನೀಡಬಹುದು ಎಂದುಕೊಳ್ಳಲಾಗಿತ್ತು.
ಆದರೆ, ಏಕಾಏಕಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಸೋಮವಾರ ಬೆಳಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದೇ ಅಭಿಮಾನಿಗಳಿಗೆ ಗರ ಬಡಿದಂತಾಗಿದೆ. ಶಿಕಾರಿಪುರದಲ್ಲಿ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ವರ್ತಕರು ಸ್ವಯಂ ಘೋಷಿತವಾಗಿ ಅಂಗಡಿಗಳನ್ನು ಬಂದ್ ಮಾಡಿದರು. ರಾಜೀನಾಮೆಯಿಂದ ಅಸಮಾಧಾನಗೊಂಡು ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಸ್ವಯಂ ಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಇನ್ನೊಂದು ಕಡೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಅವರ ಪರ ಘೋಷಣೆಗಳನ್ನು ಕೂಗಲಾಗಿದೆ.