ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಮುಜರಾಯಿಗೆ ಸೇರ್ಪಡೆ ಮಾಡಬಾರದು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಆಗ್ರಹಿಸಿದೆ.
https://www.suddikanaja.com/2021/07/14/swamiji-prophesied-about-state-politics/
ಈಡಿಗ ಸಮುದಾಯದ ಧಾರ್ಮಿಕ ಅಸ್ಮಿತೆಯಾದ ದೇಗುಲದ ಆಡಳಿತವು ಧರ್ಮದರ್ಶಿ ಡಾ.ರಾಮಪ್ಪ ಅವರ ನೇತೃತ್ವದಲ್ಲಿ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಮನವಿ ಪತ್ರ ಸ್ವೀಕರಿಸಿ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಪ್ರಕರಣ ನ್ಯಾಯಾಲಯದಲ್ಲಿದ್ದು, ಆದೇಶಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕಾಗುತ್ತದೆ. ದೇವಸ್ಥಾನ ಸಮುದಾಯದ ಆಡಳಿತದಲ್ಲಿರಬೇಕು ಎನ್ನುವುದೇ ನನ್ನ ಆಸೆಯಾಗಿದೆ. ಹೀಗಾಗಿ, ಸಮುದಾಯದ ಪ್ರಮುಖರು ನ್ಯಾಯಾಲಯಕ್ಕೆ ಅಗತ್ಯವಿರುವ ದಾಖಲೆ ನೀಡುವಂತೆ ತಿಳಿಸಿದರು.
ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ, ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ, ಪದಾಧಿಕಾರಿಗಳಾದ ಜಿ.ಡಿ.ಮಂಜುನಾಥ್, ಸುರೇಶ್ ಕೆ.ಬಾಳೇಗುಂಡಿ, ಮಹೇಶ್, ಸುಧಾಕರ್ ಶೆಟ್ಟಿಹಳ್ಳಿ, ಬಸವರಾಜ್ ಉಪಸ್ಥಿತರಿದ್ದರು.
https://www.suddikanaja.com/2020/12/14/high-court-ask-government-to-give-objection-on-sigandur-issue/