ಸುದ್ದಿ ಕಣಜ.ಕಾಂ
ಸಾಗರ: ಮೂರು ಸಲ ಪಲ್ಟಿಯಾಗಿ ನಾಟಿ ಮಾಡಿದ ಭತ್ತದ ಗದ್ದೆಗೆ ಕಾರೊಂದು ಉರುಳಿ ಬಿದ್ದಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ಚಾಲಕ ರಘು ಎಂಬಾತನ ನಿಯಂತ್ರಣ ತಪ್ಪಿ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ಕಾರು ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.
ತಾಳಗುಪ್ಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಹಾರಿದೆ. ಕಾರು ನಜ್ಜುಗುಜ್ಜಾಗಿದ್ದು, ಜೆಸಿಬಿ ಬಳಸಿ ಕಾರನ್ನು ಹೊರಗೆ ತೆಗೆಯಲಾಗಿದೆ.