ಸುದ್ದಿ ಕಣಜ.ಕಾಂ
ತೀರ್ಥಹಳ್ಳಿ: ಕಾರಿನ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿದ್ದೇ ತೀರ್ಥಹಳ್ಳಿ ಪಿಐ, ಪಿಎಸ್.ಐ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಈ ವೇಳೆ, ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, ಅವರಿಂದ 10,000 ರೂಪಾಯಿ ಮೌಲ್ಯದ 870 ಗ್ರಾಂ ಒಣ ಗಾಂಜಾ, ಮೂರು ಮೊಬೈಲ್, ಕೃತ್ಯಕ್ಕೆ ಬಳಸಿದ ಕಾರು ಮತ್ತು ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಯಾರ್ಯಾರ ಬಂಧನ | ತೀರ್ಥಹಳ್ಳಿ ತಾಲೂಕಿನ ಕೊಣಂದೂರು ನಿವಾಸಿ ರಾಘವೇಂದ್ರ(39), ಸಾಗರ ತಾಲೂಕಿನ ಆನಂದಪುರ ನಿವಾಸಿ ಚಂದ್ರಶೇಖರ್ (35), ಹೊಸನಗರ ತಾಲೂಕಿನ ನಾಗರಕೊಡಿಗೆ ನಿವಾಸಿ ಶೈಲೇಂದ್ರ ಕುಮಾರ್ (32), ಹೊಸನಗರ ತಾಲೂಕಿನ ರಿಪ್ಪನಪೇಟೆ ನಿವಾಸಿ ಹರ್ಷ (30) ಬಂಧಿತರು.
ಇವರು ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಕಾರಿನ ಡಿಕ್ಕಿಯಲ್ಲಿ ಗಾಂಜಾ ತುಂಬಿಕೊಂಡು ಹೋಗುತ್ತಿದ್ದಾಗ ಪೊಲೀಸರು ಸುರಾನಿ ಕ್ರಾಸ್ ಬಳಿ ತಡೆದು ಕಾರು ಮತ್ತು ಬೈಕಿನ ತಪಾಸಣೆ ನಡೆಸಲಾಗಿ ಒಣ ಗಾಂಜಾ ಸಿಕ್ಕಿದೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅನ್ವಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
https://www.suddikanaja.com/2021/07/09/ganja-arrest/