ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ಬಿಜೆಪಿಗೂ ಕಾಂಗ್ರೆಸ್ ಸ್ಥಿತಿಯೇ ಬರಲಿದೆ. ಹೀಗಾಗಿ, ಹೈಕಮಾಂಡ್ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಎಚ್ಚರಿಸಿದೆ.
https://www.suddikanaja.com/2020/11/23/akhil-bharatiya-veerashaiva-mahasabha-requested-byr-2/
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಅದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡುವ ಬಹುದೊಡ್ಡ ಅನ್ಯಾಯವಾಗಲಿದೆ ಎಂದು ಹೇಳಿದರು.
ಬಿ.ಎಸ್.ವೈ ಕೇವಲ ಲಿಂಗಾಯತ ಸಮಾಜ ಮಾತ್ರವಲ್ಲ. ಬೇರೆಯ ಜಾತಿ, ಧರ್ಮದ ನಾಯಕರೂ ಆಗಿದ್ದಾರೆ. ರಾಜ್ಯದಲ್ಲಿ ಪ್ರಬಲ ಲಿಂಗಾಯತ ಮುಖಂಡರಾಗಿದ್ದು, ಅವರನ್ನು ಸ್ಥಾನದಿಂದ ತೆಗೆದರೆ ವೀರೇಂದ್ರ ಪಾಟೀಲ್ ಅವರನ್ನು ಕೆಳಗಿಳಿಸಿದಾಗ ಕಾಂಗ್ರೆಸ್ ಗೆ ಆದ ಗತಿಯೇ ಆಗಲಿದೆ. ಹೀಗಾಗಿ, ಇತಿಹಾಸ ಪುನರಾವರ್ತನೆಗೆ ಅವಕಾಶ ನೀಡಬೇಡಿ ಎಂದು ಹೈಕಮಾಂಡ್ ಗೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಬಿ.ಎಸ್.ವೈ | ಹೋರಾಟದ ನೆಲೆಯಿಂದ ಬಂದಿದ್ದ ಯಡಿಯೂರಪ್ಪ ಅವರು ರಾಜಕೀಯವಾಗಿ ಗುರುತಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇಂತಹ ಧೀಮಂತ ನಾಯಕನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಲ್ಲಿ ಪಕ್ಷಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಹೇಳಿದರು.
ಪ್ರಮುಖರಾದ ಬೆನಕಪ್ಪ, ಲಿಂಗರಾಜು, ಆನಂದ್ ಮೂರ್ತಿ, ಚಂದ್ರು, ವಾಗ್ದೇವಿ, ಉಷಾ, ಪಾಲಾಕ್ಷಪ್ಪ ಉಪಸ್ಥಿತರಿದ್ದರು.
https://www.suddikanaja.com/2020/11/17/veerashaiva-lingayat-development-corporation/