ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 2021-22ನೇ ಸಾಲಿಗೆ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಿಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಅನುಷ್ಠಾನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ.
https://www.suddikanaja.com/2021/01/03/skill-job-training-for-unemployed/
18 ವರ್ಷ ಮೇಲ್ಪಟ್ಟ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿಗಳು www.kviconline.gov.in/pmegpeportal ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಯಾವುದೇ ವ್ಯಕ್ತಿ ಅಥವಾ ಅದೇ ಕುಟುಂಬದ ಸದಸ್ಯರು ಪಿ.ಎಂ.ಆರ್. ವೈ/ ಆರ್.ಇ.ಜಿ.ಪಿ/ಸಿಎಂಇಜಿಪಿ/ ಇತರೆ ಯಾವುದೇ ಸರ್ಕಾರದ ಯೋಜನೆ ಅಡಿಯಲ್ಲಿ ಸಹಾಯ ಧನ ಹಣ ಪಡೆದಿದ್ದರೆ ಅಂತಹ ವ್ಯಕ್ತಿಗಳು ಅರ್ಜಿ ಸಲ್ಲಿಸುವಂತಿಲ್ಲ.
ಇಲ್ಲಿಗೆ ಸಂಪರ್ಕಿಸಿ | ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಪ್ಪ ನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ದೂ.ಸಂ.: 08182-222802, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಬಿ ಬ್ಲಾಕ್-7, ಎರಡನೇ ಮಹಡಿ, ಉಪ ವಿಭಾಗಾಧಿಕಾರಿಗಳ ಕಚೇರಿ ಸಂಕೀರ್ಣ, ಬಾಲರಾಜ ಅರಸು ರಸ್ತೆ, ಶಿವಮೊಗ್ಗ. ದೂ.ಸಂ.: 08182-223273ಗಳನ್ನು ಸಂಪರ್ಕಿಸುವುದು.
https://www.suddikanaja.com/2021/03/08/women-in-key-post/