ಸುದ್ದಿ ಕಣಜ.ಕಾಂ
ಶಿವಮೊಗ್ಗ: ಲಂಡನ್ ನಿಂದ ಶಿವಮೊಗ್ಗಕ್ಕೆ ತರಲಾಗಿರುವ ಬಸವೇಶ್ವರರ ಪುತ್ಥಳಿ ಅನಾವರಣ ವಿಳಂಬಕ್ಕೆ ಆಗ ಅಧಿಕಾರದಲ್ಲಿದ್ದ ಸರ್ಕಾರವೇ ಕಾರಣ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾಡಿದ ಆರೋಪದ ಬಗ್ಗೆ ವೀಕ್ಷಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ ⇓
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವೇಶ್ವರ ಪುತ್ಥಳಿ ಕಳೆದ ಸರಕಾರದ ಅವಧಿಯಲ್ಲಿ ವಿದೇಶದಿಂದ ಬಂದಿದ್ದು, ಹಾಗೆಯೇ ಉಳಿದು ಬಿಟ್ಟಿತ್ತು. ಹಿಂದಿನ ಸರಕಾರ ಏಕೆ ಕ್ಯಾಬಿನೆಟ್ನಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಿ ಉದ್ಘಾಟಿಸಲಿಲ್ಲವೋ ಗೊತ್ತಿಲ್ಲ ಎಂದರು.
ಯಡಿಯೂರಪ್ಪನವರೇ ಆಗಮಿಸಲು ಕೋರುವೆ | ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಬಸವೇಶ್ವರ ಪುತ್ಥಳಿ ಅನಾವರಣಕ್ಕೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಒಪ್ಪಿಗೆ ನೀಡಿದ್ದಾರೆ. ಕೈಗೊಂಡ ನಿರ್ಣಯದಂತೆ ಗಾಂಧಿ ಪಾರ್ಕ್ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಶೀಘ್ರವೇ ಸಿಎಂ ಅವರಿಗೆ ಭೇಟಿ ನೀಡಲಿದ್ದು, ಆ ವೇಳೆ ಉದ್ಘಾಟನೆಯ ದಿನಾಂಕದ ಬಗ್ಗೆ ಚರ್ಚಿಸಲಾಗುವುದು. ಹಾಗೂ ಖುದ್ದು ಸಿಎಂ ಅವರೇ ಬರುವಂತೆ ಮನವಿ ಮಾಡಲಾಗುವುದು ಎಂದು ಈಶ್ವರಪ್ಪ ತಿಳಿಸಿದರು.
https://www.suddikanaja.com/2021/07/16/basaveshwara-statue/