ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ.ನಿಂದ ನಗರದಲ್ಲಿ ಸೈಕಲ್ ಜಾಥಾ
ಹಮ್ಮಿಕೊಳ್ಳಲಾಗಿತ್ತು.
https://www.suddikanaja.com/2021/03/13/kpcc-president-dk-shivakumar-furious-reaction-to-bjp/
ಸೈನ್ಸ್ ಮೈದಾನದಲ್ಲಿ ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಅಲ್ಲಿಂದ ಹೊರಟ ಜಾಥಾ ಗೋಪಿ ವೃತ್ತದಲ್ಲಿ ಸಮಾವೇಶಗೊಂಡು, ಬಹಿರಂಗ ಸಭೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕೀರ್ತಿ ಗಣೇಶ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬಡವರ ಪರ ಕಾಳಜಿ ಇಲ್ಲ. ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಯನ್ನು ನಿರಂತರ ಏರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಬಿಜೆಪಿ ಸರ್ಕಾರಕ್ಕೆ ಜನರ ಹಿತ ಬೇಕಾಗಿಲ್ಲ. ಜನಸಾಮಾನ್ಯರ ಮೇಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಅವರ ಜೀವನವನ್ನು ಇನ್ನಷ್ಟು ದುಸ್ತರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಭದ್ರಾವತಿಯ ಯುವ ಮುಖಂಡ ಗಣೇಶ್, ಸೂಡಾ ಮಾಜಿ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ಪೆಟ್ರೋಲ್ , ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿದರು.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾರಂಗೇಗೌಡ, ಪ್ರಮುಖರಾದ ಜಿ. ಮಧುಸೂದನ್, ಕೆ. ಚೇತನ್, ಎಚ್.ಎಸ್. ಬಾಲಾಜಿ, ವಿಜಯ್, ರವಿ, ಮಹಮ್ಮದ್ ನಿಹಾಲ್, ವಿನಯ್, ಗಿರಿ, ಭರತ, ಶ್ರೀಜಿತ್, ಅಬ್ದುಲ್ಲಾ, ಪುರಲೆ ಮಂಜು ಉಪಸ್ಥಿತರಿದ್ದರು.
https://www.suddikanaja.com/2020/11/09/man-cheats-saying-drdo-jobs-and-took-lakhs-of-amount/