ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಎನ್.ಟಿ.ರಸ್ತೆಯಲ್ಲಿರುವ ಗಾಜನೂರು ಕಡೆ ಹೋಗುವ ಬಸ್ ನಿಲ್ದಾಣದ ಸಮೀಪ ಮಹಿಳೆಯೊಬ್ಬರ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಹಾಕಿ ಕೊಲೆ ಮಾಡಲಾಗಿದೆ.
READ | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದವರು ಅರೆಸ್ಟ್
ಮಂಡೇನಕೊಪ್ಪ ಗ್ರಾಮದ ನಿವಾಸಿ ಲತಾ ಹನುಮಂತ ನಾಯ್ಕ್(40 )ಎಂಬುವವರು ಮೃತಪಟ್ಟಿದ್ದಾರೆ.
ದುಷ್ಕರ್ಮಿಗಳು ಸಿಮೆಂಟಿನ ಇಟ್ಟಿಗೆಯನ್ನು ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದಾರೆ ದೂರಿನಲ್ಲೊ ತಿಳಿಸಲಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 302ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ.