ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಡೀ ದೇಶವೇ ಕೋವಿಡ್ ಮೂರನೇ ಅಲೆಯ ಭೀತಿಯಲ್ಲಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳಾದಲ್ಲಿ ಸೋಂಕಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕೇರಳಾದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಶಿವಮೊಗ್ಗದಲ್ಲೂ ಭೀತಿ ಶುರುವಾಗಿದೆ.
ಕೇರಳಾದಿಂದ ಬರುವವರ ಮೇಲೆ ಕಣ್ಣಿಡಬೇಕು ಎಂಬ ಕಾರಣಕ್ಕೆ ಆಗುಂಬೆಯಲ್ಲಿ ಚೆಕ್ ಪೋಸ್ಟ್ ಆರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
https://www.suddikanaja.com/2021/02/08/penalty-on-food-feeding-to-animals-in-agumbe-ghat/
ಕರಾವಳಿ ಮತ್ತು ಕೇರಳಾದೊಂದಿಗೆ ತೀರ್ಥಹಳ್ಳಿ ಸಂಪರ್ಕ ಹೊಂದಿರುವುದರಿಂದ ಹೆಚ್ಚು ಮುಂಜಾಗೃತಾ ಕ್ರಮಗಳನ್ನು ಅನುಸರಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಸೋಂಕು ತಪಾಸಣೆ ಕೇಂದ್ರ | ತೀರ್ಥಹಳ್ಳಯಲ್ಲಿ ಸೋಂಕು ತಪಾಸಣೆ ಕೇಂದ್ರ ಸ್ಥಾಪಿಸಿ ಹೊರ ರಾಜ್ಯಗಳಿಂದ ಬರುವವರ ಆರ್.ಟಿ.ಪಿ.ಸಿ.ಆರ್. ಅಥವಾ ರ್ಯಾಟ್ ಟೆಸ್ಟ್ ಮಾಡಿಸಬೇಕು. ಆಗುಂಬೆಯಲ್ಲಿ ಚೆಕ್ ಪೋಸ್ಟ್ ಆರಂಭಿಸಿ, ಅದಕ್ಕೆ ಅಗತ್ಯವಿರುವ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಹೋಮ್ ಸ್ಟೇ, ಹೋಟೆಲ್ ಮೇಲೂ ನಿಗಾ | ಪ್ರವಾಸೋದ್ಯಮ ಕೇಂದ್ರವಾಗಿರುವ ಶಿವಮೊಗ್ಗಕ್ಕೆ ನಾನಾ ಭಾಗಗಳಿಂದ ಪ್ರವಾಸಿಗಳು ಬರುವುದರಿಂದ ಅವರ ಮೇಲೆಯೂ ನಿಗಾ ಇಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಹೋಂ ಸ್ಟೇ , ಹೋಟೆಲಿಗೆ ಬರುವವರು ಆನ್ಲೈನ್ ನಲ್ಲಿ ಟಿಕೆಟ್ ಕಾಯ್ದಿರಿಸಬೇಕು. ಕನಿಷ್ಠ 72 ಗಂಟೆಯೊಳಗಿನ ಕೊರೊನಾ ತಪಾಸಣೆಯ ನೆಗೆಟಿವ್ ವರದಿ ನೀಡಬೇಕು ಎಂದು ಸಿಎಂ ತಿಳಿಸಿದ್ದಾರೆ.
https://www.suddikanaja.com/2021/07/31/chief-minister-basavaraj-bommai-video-conference-with-dcs-about-covid-contral/