ಸುದ್ದಿ ಕಣಜ.ಕಾಂ | RIPPONPET | CRIME
ಹೊಸನಗರ: ಸಾಲದ ಬಾಧೆ ತಾಳದೇ ರೈತರೊಬ್ಬರು ತೋಟದಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
https://www.suddikanaja.com/2021/06/27/woman-tried-to-suicide-in-sharavathi-back-water/
ಮಸ್ಕಾನಿ ಗ್ರಾಮದ ಸತೀಶ್ (50) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಶುಕ್ರವಾರ ಸಂಜೆ ತೋಟದಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರ ಮೃತಪಟ್ಟಿದ್ದಾರೆ.
ಸತೀಶ್ ಅವರಿಗೆ ಮೂರು ಎಕರೆ ಜಮೀನು ಇದೆ. ಆದರೆ, ಬ್ಯಾಂಕ್ ಹಾಗೂ ಖಾಸಗಿ ಸೇರಿ ಒಟ್ಟು 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಇದರಿಂದ ಮನನೊಂದಿದ್ದ ಇವರಿಗೆ ಕಳೆದ ಮೂರು ವರ್ಷಗಳಿಂದ ಸರಿಯಾದ ಬೆಳೆ ಬಾರದೇ ಭಾರಿ ನಷ್ಟ ಕೂಡ ಆಗಿತ್ತು. ಹೀಗಾಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.suddikanaja.com/2021/07/29/man-suicide-in-home/