ಸುದ್ದಿ ಕಣಜ.ಕಾಂ | DISTRICT | SC ST WELFARE
ಶಿವಮೊಗ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲ ಇಲಾಖೆಗಳಲ್ಲಿ ಮೀಸಲು ಇರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಎಚ್ಚರಿಕೆ ನೀಡಿದರು.
https://www.suddikanaja.com/2021/01/14/rashtrakutas-sculpture-found-in-shiralakoppa/
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅನುದಾನ ಬಳಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದಾನ ಬಿಡುಗಡೆಯಾಗುವ ಮೊದಲೇ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆದು ಬ್ಯಾಂಕಿನಿಂದ ಆರ್ಥಿಕ ಸಹಾಯ ನೀಡಲು ಹಿಂದಿನ ವರ್ಷದ ಗುರಿ ಬಾಕಿಯಿದ್ದರೆ, ಅದನ್ನು ಪ್ರಸ್ತುತ ಹಣಕಾಸು ಸಾಲಿನಲ್ಲಿ ಪೂರ್ಣಗೊಳಿಸಬೇಕು. ಅಂತಹ ಪ್ರಸ್ತಾವನೆಗಳ ಕುರಿತು ಬ್ಯಾಂಕರ್ ಗಳ ಸಭೆಯಲ್ಲಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಸಭೆಯಲ್ಲಿ ಕಡ್ಡಾಯವಾಗಿ ಇಲಾಖೆ ಅಧಿಕಾರಿಗಳೇ ಆಗಮಿಸಬೇಕು
ಪ್ರಗತಿ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಇಲಾಖೆ ಅಧಿಕಾರಿಗಳೇ ಆಗಮಿಸಬೇಕು. ಪ್ರತಿ ತಿಂಗಳ ಪ್ರಗತಿ ವರದಿಯನ್ನು ಮೊದಲ ವಾರದ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಗೆ ಸಹಿ ಮಾಡಿ ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಪ್ರಗತಿ ವರದಿಯನ್ನು ನಮೂನೆಯಲ್ಲಿ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
https://www.suddikanaja.com/2021/06/24/high-techtouch-to-gandhi-park/