ಸುದ್ದಿ ಕಣಜ.ಕಾಂ | TALUK | CRIME
ಸೊರಬ: ತಾಲೂಕಿನ ಕವಡಿ ಗ್ರಾಮದಲ್ಲಿ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹಾಲೇಶ್(33) ಮೃತಪಟ್ಟ ದುರ್ದೈವಿ. ಕೂಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಕೆರೆ ಏರಿ ಮೇಲೆ ಆಯತಪ್ಪಿ ಬೈಕ್ ಸಹಿತ ಕೆರೆಗೆ ಬಿದಿದ್ದಾರೆ. ಬೈಕಿನಲ್ಲಿದ್ದ ರೇವಣಪ್ಪ ಎಂಬಾತ ಈಜಿ ದಡ ಸೇರಿದ್ದಾನೆ. ಆದರೆ, ಹಾಲೇಶ್ ತಲೆಗೆ ಪೆಟ್ಟು ಬಿದ್ದಿದ್ದರಿಂದ ಮುಳುಗಿ ಮೃತಪಟ್ಟಿದ್ದಾನೆ.
READ | ರವೀಂದ್ರನಗರದಲ್ಲಿ ಬೆಳ್ಳಬೆಳಗ್ಗೆ ನಡೀತು ಕಳ್ಳತನ
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ರಾತ್ರಿಯಾದ್ದರಿಂದ ಮಾರನೇ ದಿನ ಕಾರ್ಯಾಚರಣೆ ನಡೆಸಿದ್ದು, ನೀರಿನಿಂದ ಶವವನ್ನು ಹೊರ ತೆಗೆದು ಕುಟುಂಬಕ್ಕೆ ಒಪ್ಪಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.