ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಆರು ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳಿಗೆ 2021-22 ನೇ ಸಾಲಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
16 ರಿಂದ 24 ವಯೋಮಾನದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
https://www.suddikanaja.com/2021/02/24/cm-bs-yadiyurappa-birthaday-in-shivamogga/
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಸಾವಿರ ರೂಪಾಯಿ ಶಿಷ್ಯವೇತನ ನೀಡಲಾಗುವುದು. ಒಬ್ಬ ಅಭ್ಯರ್ಥಿ ಒಮ್ಮೆ ಮಾತ್ರ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕಡೆಯ ದಿನವಾಗಿರುತ್ತದೆ.
ಅರ್ಜಿಯನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಕಚೇರಿಯಲ್ಲಿ ಉಚಿತವಾಗಿ ಹಾಗೂ ಅಕಾಡೆಮಿಯ ವೆಬ್ಸೈಟ್ https://sangeetanrityaacademy.karnataka.gov.in ನಲ್ಲಿ ಪಡೆದು ಸಲ್ಲಿಸಬಹುದು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಹೆಸರಿನ ಫೇಸ್ಬುಕ್ ಪುಟದಲ್ಲೂ ಅರ್ಜಿ ಪಡೆಯಬಹುದಾಗಿದೆ. ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದು.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು 10 ರೂ. ಸ್ಟ್ಯಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ರಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ಇಲ್ಲಿಗೆ ಕಳುಹಿಸಿಕೊಡಬೇಕೆಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2021/02/06/central-government-agrees-to-give-extra-chance-candidate-who-have-last-chance-to-write-upsc-exam/