ಸುದ್ದಿ ಕಣಜ.ಕಾಂ | TALUK | CRIME
ಶಿವಮೊಗ್ಗ: ಅಡಿಕೆ, ಬಾಳೆ ಮಿಶ್ರಿತ ತೋಟದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ, ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ತಾಲ್ಲೂಕು ಅಗಸವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ಸರ್ವೇ ನಂ. 167ರ ತೋಟದಲ್ಲಿ ಮುನಿರಂಗೆಗೌಡ ಅಲಿಯಾಸ್ ಕಿರಣ್ ಎಂಬಾತನನ್ನು ಬಂಧಿಸಲಾಗಿದೆ. ತೋಟದಲ್ಲಿ ಈತ 24 ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ.
ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಜಿ.ಬಿ.ಮಂಜುನಾಥ್, ಎನ್.ಹಾಲಾ ನಾಯ್ಕ್, ಸಿಬ್ಬಂದಿ ಹಾಗೂ ತುಂಗಾನಗರ ಪೊಲೀಸ್ ಠಾಣೆ ಪಿಐ ದೀಪಕ್ ಸೇರಿ ಹಲವರು ಕಾರ್ಯಾಚರಣೆ ನಡೆಸಿದ್ದಾರೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.