ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: ಜಿಲ್ಲೆಯಲ್ಲಿ ಆಗಸ್ಟ್ 22ರಂದು ನಡೆಯಲಿರುವ ಟಿ.ಇ.ಟಿ (ಶಿಕ್ಷಕರ ಅರ್ಹತಾ ಪರೀಕ್ಷೆ)ಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು.
ಫೇಲ್ ಆದವರಿಗೂ ಮತ್ತೊಂದು ಅವಕಾಶ, ಪರೀಕ್ಷಾ ಶುಲ್ಕ ಕಟ್ಟಲು ಲಾಸ್ಟ್ ಡೇಟ್ ಏನು, ಎಲ್ಲೆಲ್ಲಿ ನಡೆಯಲಿವೆ ಪರೀಕ್ಷೆ?
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಟಿ.ಇ.ಟಿ ಪರೀಕ್ಷೆ ಆಯೋಜನೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
23 ಕೇಂದ್ರಗಳಲ್ಲಿ ನಡೆಯಲಿದೆ ಪರೀಕ್ಷೆ
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲನೇ ಅಧಿವೇಶನದಲ್ಲಿ 2,697 ಹಾಗೂ ಎರಡನೇ ಅಧಿವೇಶನದಲ್ಲಿ 4,628 ಒಟ್ಟು 7,325 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೇಂದ್ರಗಳಿಗೆ ಕೇಂದ್ರ ಸ್ಥಾನಿಕ ಜಾಗೃತ ದಳ ಹಾಗೂ 16 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಸ್ವೀಕೃತಿ, ಖಜಾನೆಯಲ್ಲಿ ಠೇವಣಿ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಬೇಕು. 144 ಸೆಕ್ಷನ್ ಘೋಷಿಸುವುದರಿಂದ ಪರೀಕ್ಷಾ ವ್ಯಾಪ್ತಿಯ ಒಳಗೆ ಅಭ್ಯರ್ಥಿಗಳು ಮತ್ತು ಪರೀಕ್ಷೆಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಯಾರನ್ನೂ ಬಿಡುವಂತಿಲ್ಲ ಎಂದು ನಿರ್ದೇಶನ ನೀಡಿದರು.
READ | ಡ್ರಾ ಮಾಡದಿದ್ದರೂ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ಹಣ ಮಂಗಮಾಯ!
ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ
ಪರೀಕ್ಷೆ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮೊದಲು ಅಭ್ಯರ್ಥಿಗಳ ಥರ್ಮಲ್ ಸ್ಕ್ರೀನಿಂಗ್, ಕೊಠಡಿಯ ಸ್ಯಾನಿಟೈಸೇಶನ್ ಮಾಡಬೇಕು. ಅಭ್ಯರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ, ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಕೋವಿಡ್ ಪೀಡಿತರಿಗೆ ಅಥವಾ ರೋಗ ಲಕ್ಷಣ ಇರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಮುಖ್ಯ ದ್ವಾರದಲ್ಲಿ ಆರೋಗ್ಯ ತಪಾಸಣಾ ಕೌಂಟರ್ ತೆರೆಯಬೇಕು ಎಂದರು.
ಡಿ.ಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು, ಪರೀಕ್ಷಾ ನೋಡಲ್ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗದ 10 ಪರೀಕ್ಷಾ ಕೇಂದ್ರಗಳಲ್ಲಿ ಏ.11ರಂದು ನಡೆಯಲಿದೆ ಕೆ-ಸೆಟ್ ಪರೀಕ್ಷೆ , ಪರೀಕ್ಷಾ ಕೇಂದ್ರ ಮಾಹಿತಿ ಇಲ್ಲಿದೆ