ಸುದ್ದಿ ಕಣಜ.ಕಾಂ | KARNATAKA | POLITICS
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾಂತ್ ರಾಜ್ ವರದಿ ಬಿಡುಗಡೆಯ ಬಗ್ಗೆ ಗಂಭೀರ ಆರೋಪಿಸಿದ್ದಾರೆ.
https://www.suddikanaja.com/2021/04/18/adondittu-kala-movie-shooting-in-thirthahalli/
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಿಡುಗಡೆಗೆ ಪ್ರಭಾವಿಗಳೇ ಅಡ್ಡಿಪಡಿಸಿದ್ದಾರೆ ಎಂದು ಬೆಂಕಿ ಕಾರಿದ್ದಾರೆ.
ರಾಜ್ಯದಾದ್ಯಂತ ಪ್ರಯಾಣಿಸಿ, ತಳಮಟ್ಟದ ಅಧ್ಯಯನ ನಡೆಸಿ ಸಮೀಕ್ಷೆ ವರದಿಯನ್ನು ಕಾಂತ್ ರಾಜ್ ಅವರು ಮಂಡಿಸಿದ್ದರು. ಆದರೆ, ಕೆಲವು ಪ್ರಭಾವಿಗಳು ಅದರ ಬಿಡುಗಡೆಗೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.
ಜಂಟಿ ಸರ್ಕಾರ ಆಸಕ್ತಿ ತೋರಲಿಲ್ಲ
ವರದಿ ಮಂಡಿಸುವ ಹೊತ್ತಿಗೆ ಸಿದ್ದರಾಮಯ್ಯ ಅವರ ಅಧಖಾರ ಅವಧಿ ಮುಗಿದಿತ್ತು. ನಂತರ, ಅಧಿಕಾರ ಸ್ವೀಕರಿಸಿದ ಜಂಟಿ ಸರ್ಕಾರ ಇದರ ಬಗ್ಗೆ ಆಸಕ್ತಿ ವಹಿಸಲಿಲ್ಲ. ಈಗ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಇದಕ್ಕಾಗಿ ಪ್ರಯತ್ನಿಸುತ್ತಿದೆ. ವರದಿಯು ಈಗಾಗಲೇ ಜಯಪ್ರಕಾಶ್ ಹೆಗಡೆ ಅವರಿಗೆ ಹಸ್ತಾಂತರಿಸಲಾಗಿದೆ. ಇನ್ನೇನೇನು ಮಾಡಬೇಕು ಎಂದು ಪರಿಶೀಲನೆ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕರಾದ ಆಯನೂರು ಮಂಜುನಾಥ್, ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಒ ವೈಶಾಲಿ, ವಿ.ರಾಜು ಉಪಸ್ಥಿತರಿದ್ದರು.
https://www.suddikanaja.com/2021/02/14/subsidy-to-drip-irrigation-cm-bs-yadiyurappa/