ಸುದ್ದಿ ಕಣಜ.ಕಾಂ | CITY | PROTEST
ಶಿವಮೊಗ್ಗ: ದೇಶದಲ್ಲಿ ಶಾಂತಿ ಕದಡುವ ಹಾಗೂ ಕಾಂಗ್ರೆಸ್ ವರಿಷ್ಠರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಂಗಳವಾರ ಪ್ರತಿಭಟನೆ ಮಾಡಲಾಯಿತು.
https://www.suddikanaja.com/2021/08/05/congress-protest/
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕರು ಹಾಗೂ ರಾಜ್ಯದ ಬುದ್ಧಿ ಜೀವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಯತ್ನಾಳ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಾಯಿ ಚಪಲಕ್ಕಾಗಿ ಯತ್ನಾಳ್ ಹೇಳಿಕೆ
ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೇಳಿಕೆ ನೀಡುತಿದ್ದಾರೆ. ರಾಜಕರಣದಿಂದ ಮಾನಸಿಕ ಹಿಡಿತ ಕಳೆದುಕೊಂಡಿರುವ ಯತ್ನಾಳ್ ಒಬ್ಬ ಹುಚ್ಚನಂತೆ ಈ ದೇಶದ ಬುದ್ಧಿ ಜೀವಿಗಳ ವಿರುದ್ಧ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯಪಾಲರಲ್ಲಿ ಯುವ ಕಾಂಗ್ರೆಸ್ ಆಗ್ರಹಿಸಿದೆ.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್.ಕುಮರೇಶ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಶಿಕುಮಾರ್ ಸಿರಿಗೆರೆ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲೀಮ್ ಅಹಮ್ಮದ್ ಸಿರಿಗೆರೆ, ಪದಾಧಿಕಾರಿಗಳಾದ ಅರುಣ್ ನವುಲೆ , ವೆಂಕಟೇಶ್ ಕಲ್ಲೂರು , ಪವನ್ , ಮಸ್ತಾನ್, ಸುಹಾಸ್ ಗೌಡ , ಶ್ರೀನಿವಾಸ್, ರಾಹುಲ್ ಸಿಗೇಹಟ್ಟಿ, ಪ್ರಶಾಂತ್ , ದೇವರಾಜ್ , ನಾಗರಾಜ್ , ವೆಂಕಟೇಶ್, ಅಭಿ, ಚೇತನ್, ನಂದಕುಮಾರ್, ರಾಖಿ ಉಪಸ್ಥಿತರಿದ್ದರು.
https://www.suddikanaja.com/2021/03/24/fir-against-rakesh-tikait-in-kote-police-station/