ಸುದ್ದಿ ಕಣಜ.ಕಾ | CITY CORPORATION | POLITICS
ಶಿವಮೊಗ್ಗ: ನಗರದ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸಾಮಾನ್ಯ ಸಭೆಯಲ್ಲಿ ಸುಮಾರು ಒಂದೂವರೆ ಗಂಟೆ ಆಸ್ತಿ ತೆರಿಗೆಯ ವಿಚಾರದ ಕುರಿತು ಚರ್ಚಿಸಲಾಯಿತು. ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಎಚ್.ಸಿ.ಯೋಗೇಶ್, ನಾಗರಾಜ್ ಕಂಕಾರಿ, ರಮೇಶ್ ಹಗಡೆ ಅವರು ಪಾಲಿಕೆ ಸದನದ ಬಾವಿಗೆ ಇಳಿದು ಧರಣಿ ನಡೆಸಿದರು. ಹಾರಿಕೆ ಹಾಗೂ ಸುಳ್ಳು ಮಾಹಿತಿಯನ್ನು ಯಾವುದೇ ಕಾರಣಕ್ಕೂ ಸಭೆಗೆ ನೀಡಬಾರದು ಎಂದು ಆಗ್ರಹಿಸಿದರು.
https://www.suddikanaja.com/2021/08/25/strike-before-shivamogga-city-corporation/
ಕೊರೊನಾದಿಂದಾಗಿಯೇ ಜನ ಸಂಕಷ್ಟದಲ್ಲಿರುವಾಗ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ತೆರಿಗೆ ಏರಿಕೆ ಮಾಡಿರುವುದು ಸರಿಯಲ್ಲ. ‘ಒನ್ ನೇಷನ್ ಒನ್ ಟ್ಯಾಕ್ಸ್’ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿದ್ದಾರೆ. ಹೀಗಿರುವಾಗ, ಬೆಂಗಳೂರಿಗೊಂದಿಗೆ ತೆರಿಗೆ ವಿಧಿಸಲಾಗಿದೆ ಎಂದು ರಮೇಶ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸುವಂತೆ ಒತ್ತಡ
ಪಾಲಿಕೆ ವಿರೋಧ ಪಕ್ಷದವರು ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಕಳೆದ ಎರಡು ತಿಂಗಳ ಹಿಂದೆ ನಡೆದ ಸಭೆಯಲ್ಲಿ ಪ್ರಸ್ತಾವನೆ ಕಳುಹಿಸುವುದಾಗಿ ಒಪ್ಪಿಕೊಳ್ಳಲಾಗಿತ್ತು. ಆದರೆ, ಇದುವರೆಗೆ ಕಳುಹಿಸಿಲ್ಲ ಎಂದು ಟೀಕಿಸಿದರು. ನಂತರ, ಮಾತನಾಡಿದ ಮೇಯರ್ ಸುನೀತ್ ಅಣ್ಣಪ್ಪ, ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸುವುದಾಗಿ ಹೇಳಿದರು.
ಮಾಲ್ ಲೀಸ್ ವರದಿ ವಿಳಂಬ
ಮಾಲ್ ಲೀಸ್ 99 ವರ್ಷಕ್ಕೆ ಹೆಚ್ಚಿಸುವ ಕುರಿತಾದ ವಿಷಯ ಅಜೆಂಡಾಕ್ಕೆ ಹೇಗೆ ಸೇರಿತು ಎಂಬುವುದಕ್ಕೆ ಇದುವರೆಗೆ ಉತ್ತರ ಸಿಕ್ಕಿಲ್ಲ. ಯಾರ ಪ್ರಮಾದ ಎಂಬುವುದೂ ತಿಳಿದುಬಂದಿಲ್ಲ. ಇದಕ್ಕಾಗಿ ರಚಿಸಿದ ತನಿಖಾ ತಂಡದ ವರದಿ ಎಲ್ಲಿದೆ ಎಂದು ಯಮುನಾ ರಂಗೇಗೌಡ ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ನಾಗರಾಜ್ ಕಂಕಾರಿ, ತಂಡವು ಕರೆಯುವ ಸಭೆಗೆ ಅಧಿಕಾರಿಗಳು ಸರಿಯಾದ ಮಾಹಿತಿಯೇ ನೀಡುತ್ತಿಲ್ಲ ಎಂದು ಆರೋಪಿಸಿದರು.
ಪಾಲಿಕೆ ಉಪ ಮೇಯರ್ ಶಂಕರ್ ಗನ್ನಿ, ಆಯುಕ್ತ ಚಿದಾನಂದ್ ವಟಾರೆ, ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
https://www.suddikanaja.com/2021/05/18/hd-kumara-swamy-tweet-for-black-fungus-medicine/